ಜನ ಮನದ ನಾಡಿ ಮಿಡಿತ

Advertisement

ವಂಚನೆಯಲ್ಲಿ ಚೈತ್ರಾನಿಗೆ ಸಾಥ್‌ ಕೊಟ್ಟ ಗಗನ್​ ಕಡೂರ್​ನನ್ನು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕಿತ್ತೆಸೆದ ಜಿಲ್ಲಾ ಯುವಮೋರ್ಚಾ..!!

ನಕಲಿ RSS ಪ್ರಚಾರದ ವ್ಯಕ್ತಿಯನ್ನ ಸೃಷ್ಟಿಸಿರುವ ಆರೋಪದಡಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಗಗನ್​ ಕಡೂರ್​ ನನ್ನು ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿಗೆ ಟಿಕೆಟ್​ ಕೊಡಿಸುತ್ತೇನೆ ಎಂಬ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗಗನ್​ ಕಡೂರ್​ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಗಗನ್​ನನ್ನು ಪಕ್ಷದ ಸ್ಥಾನದಿಂದ ವಿಮುಕ್ತಿಗೊಳಿಸಿದ್ದಾರೆ.

ಬಿಜೆಪಿ ಟಿಕೆಟ್​ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಎಂಬವರಿಗೆ ಚೈತ್ರಾ ಕುಂದಾಪುರ 5 ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಗಗನ್​ ಕಡೂರ್​ RSS ಹಿರಿಯ ಪ್ರಚಾರಕನೆಂದು ವಿಶ್ವನಾಥ್​ ಎಂಬವರ ಹೆಸರನ್ನು ಸೃಷ್ಟಿಸಿ ಅವರ ಮೂಲಕ ಶಿಫಾರಸ್ಸು ಮಾಡೋದಾಗಿ ಭರವಸೆ ನೀಡಿದ್ದಾನೆ. ಎಂಬ ಮಾಹಿತಿ ಲಭ್ಯವಾಗಿದೆ. ಅದಲ್ಲದೇ ಈ ಖತರ್ನಾಕ್‌ ಚಿಕ್ಕಮಗಳೂರಲ್ಲಿ ವಿಶ್ವನಾಥ್ ಜೀ ಅಂತಾ ಬೇರೊಬ್ಬನನ್ನ ಭೇಟಿ ಮಾಡಿಸಿ ಮಹಾ ಮೋಸವನ್ನು ಮಾಡಿದ್ದಾನೆ. ಇದೀಗ ಆರೋಪಿಗಳು ಸಿಸಿಬಿ ಪೊಲೀಸರ ತೆಕ್ಕೆಗೆ ಬಿದ್ದಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!