ಕೇರಳದಲ್ಲಿ ನಿಫಾ ವೈರಸ್ ಎರಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಹಿನ್ನಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸೂಚನೆ ನೀಡಿದೆ.

ನಗರದಲ್ಲಿ ಈಗಾಗಲೇ ಒಂದೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾರ್ಡ್ ಕ್ಲೀನಿಂಗ್ಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದ್ದು, ಏರ್ಪೋರ್ಟ್ನಲ್ಲೂ ಕೂಡ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಬಾವಲಿಗಳಿಂದ ಹುಟ್ಟಿಕೊಳ್ಳುವ ಈ ನಿಫಾ ವೈರಸ್ಗೆ ಕೇರಳದ ಕಲ್ಲಿಕೋಟೆ ಜಿಲ್ಲೆಯಲ್ಲಿ ಆಗಸ್ಟ್ 30 ಹಾಗೂ ಸೆಪ್ಟೆಂಬರ್ 11ರಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದು ಎರಡನೇ ಬಾರಿಗೆ ನಿಫಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.
ಇನ್ನೂ ನಿಫಾ ವೈರಸ್ನಿಂದಾಗಿಯೇ ಇಬ್ಬರು ಸಾವನ್ನಪ್ಪಿರೋದು ಖಚಿತ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. 2018ರಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು.



