ಜನ ಮನದ ನಾಡಿ ಮಿಡಿತ

Advertisement

19 ರಿಂದ 23 ರವರೆಗೆ 60ನೇ ವರ್ಷದ ಮೂಡಬಿದಿರೆ ಗಣೇಶೋತ್ಸವ; ಲೋಕ ಕಲ್ಯಾಣಕ್ಕಾಗಿ ಗಣಯಾಗ

ಮೂಡುಬಿದಿರೆ: ಮೂಡುಬಿದಿರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ 60ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 19 ರಿಂದ 23ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ. ಶ್ರೀಪತಿ ಭಟ್ ಅವರು ಹೇಳಿದ್ದಾರೆ.


ಸಮಾಜ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇವರು ‘1964 ರಲ್ಲಿ ಆರಂಭಗೊಂಡ ಮೂಡುಬಿದಿರೆ ಗಣೇಶೋತ್ಸವಕ್ಕೆ ಅದರದ್ದೇ ಆದ ಇತಿಹಾಸವಿದ್ದು ಐದು ದಿವಸಗಳಲ್ಲಿ ನಡೆಯುವ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ, ಸಮಯಕ್ಕೆ ಸರಿಯಾಗಿ ನಡೆಯಲಿದೆ. 60ರ ಸಂಭ್ರಮದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮೂಡುಬಿದಿರೆ ಮಾತ್ರವಲ್ಲದೆ ಲೋಕಕಲ್ಯಾಣಕ್ಕಾಗಿ ಅಷ್ಟೋತ್ತರ ಸಹಸ್ರ ನಾಳಿಕೇರ ಅಷ್ಟದ್ರವ್ಯ ಗಣಯಾಗ ನಡೆಯಲಿದ್ದು ಇದಕ್ಕೆ ಸಂಬಂಧಿಸಿ ಈಗಾಗಲೇ ಸಿದ್ಧತೆಗಳು ನಡೆಯುತ್ತಿದೆ.


19 ರಂದು ಬೆಳಿಗ್ಗೆ 10ರಿಂದ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು ಮೂಡುಬಿದಿರೆ ಜೈನ ಮಠದ ಮಹಾಸ್ವಾಮೀಜಿ ಯವರು ಆಶೀರ್ವಚನ ನೀಡಲಿದ್ದಾರೆ, ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣರು ದೀಪ ಪ್ರಜ್ವಲನ ಮಾಡಲಿದ್ದು ಮಂಗಳೂರು ಪೊಲೀಸ್ ಆಯುಕ್ತರು ಗೌರವ ಉಪಸ್ಥಿತ ರಿರಲಿದ್ದಾರೆ ಎಂದ ಅವರು ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.


ಸಮಿತಿಯ ಪ್ರಧಾನ ಕಾರ್ಯದರ್ಶಿ ನಾರಾಯಣ ಪಿ.ಎಮ್. ಅವರು ಮಾತನಾಡಿ ‘ಐದು ದಿವಸಗಳಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ, ಪ್ರತಿದಿನ ಊಟ, ಉಪಹಾರದ ವ್ಯವಸ್ಥೆ ಇದೆ, ಕೊನೆಯ ದಿನ ವಿಸರ್ಜನಾ ಪೂಜೆ ನಡೆದು ರಾತ್ರಿ 8 ಗಂಟೆಗೆ ಸರಿಯಾಗಿ ವೈಭವದ ಶೋಭಾಯಾತ್ರೆ ಮೂಲಕ ವಿಸರ್ಜನಾ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಸಂಚಾಲಕರಾದ ರಾಜಾರಾಮ್ ನಾಗರಕಟ್ಟೆ, ಜತೆ ಕಾರ್ಯದರ್ಶಿ ಸುದರ್ಶನ ಎಮ್, ತೋಡಾರು ದಿವಾಕರ ಶೆಟ್ಟಿ, ಲಕ್ಷ್ಮಣ ಪೂಜಾರಿ, ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!