ಜನ ಮನದ ನಾಡಿ ಮಿಡಿತ

Advertisement

ರಸ್ತೆಗೆ ಹರಿಯುತ್ತಿದ್ದ ರಕ್ತ ಮಿಶ್ರಿತ ಕೊಳಚೆ ನೀರಿಗೆ ಪುರಸಭೆಯಿಂದ ಶಾಶ್ವತ ಪರಿಹಾರ

ಮೂಡುಬಿದಿರೆಯ ಮಾರ್ಕೆಟ್ ನಲ್ಲಿರುವ ಮಾಂಸದಂಗಡಿಗಳಿಂದ ಕಡಿದಿರುವ ಕುರಿ, ಕೋಳಿ, ಆಡುಗಳ ರಕ್ತ ಮತ್ತು ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯದಂತೆ ಮೂಡುಬಿದಿರೆ ಪುರಸಭೆಯ ಅಧಿಕಾರಿಗಳು ಶಾಶ್ವತ ಪರಿಹಾರ ನೀಡಿದ್ದಾರೆ.

ಮಾರ್ಕೆಟಿನಲ್ಲಿ ವ್ಯಾಪಾರ ಮಾಡುತ್ತಿರುವ ಮಾಂಸದಂಗಡಿಗಳಿಂದ ಕೆಲವು ದಿನಗಳಿಂದ ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯುತ್ತಿದ್ದು, ಇದರಿಂದ ಓಡಾಡುತ್ತಿರುವ ಪಾದಾಚಾರಿಗಳು ಮತ್ತು ಅಲ್ಲಿಯೇ ಪಕ್ಕದಲ್ಲಿ ಇತರ ವ್ಯಾಪಾರ ನಡೆಸುತ್ತಿರುವ ಅಂಗಡಿಯವರು ತೊಂದರೆಯನ್ನನ್ನು ಅನುಭವಿಸುತ್ತಿದ್ದರು.


ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯೂ ಪ್ರಸಾರಗೊಂಡಿತ್ತು. ಇದೀಗ ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಂಡು ರಸ್ತೆಯ ಬದಿಗಳಲ್ಲಿ ಹರಿಯುತ್ತಿದ್ದ ನೀರು ಪೈಪ್ ಮೂಲಕ ಹರಿದು ಹೋಗುವಂತೆ ವ್ಯವಸ್ಥೆಯನ್ನು ಮಾಡಿಸಿದ್ದಾರೆ.
ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಮುಖ್ಯಾಧಿಕಾರಿ ಇಂದು ಅವರ ಕಾರ್ಯ ವೈಖರಿಯನ್ನು ಸ್ಥಳೀಯರು ಪ್ರಶಂಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭಾ ಸಿಬಂದಿ ಸುಧೀಶ್ ಹೆಗ್ಡೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!