ಜನ ಮನದ ನಾಡಿ ಮಿಡಿತ

Advertisement

ʼಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಕಡ್ಡಾಯವಾಗಿ ಸರಕಾರದ ನಿಯಮಗಳನ್ನು ಪಾಲಿಸಬೇಕುʼ; ಎಸ್.ಐ.ಹರೀಶ್ ನೇತೃತ್ವದಲ್ಲಿ ಪ್ರಮುಖರ ಸಭೆ

ಸೆ. 19 ರಂದು ನಡೆಯಲಿರುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಶಾಂತಿಯುತವಾಗಿ ಆಚರಿಸುವ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಸ್.ಐ.ಹರೀಶ್ ನೇತೃತ್ವದಲ್ಲಿ ಸಮಾಜದ ಪ್ರಮುಖರ ಸಭೆ ನಡೆದಿದೆ. ಸಭೆಯಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಪಾಲಿಸಬೇಕಾದ ಸರಕಾರದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.


ತಾಲೂಕಿನಲ್ಲಿ ನಡೆಯುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಸಿದ್ದವಿದೆ. ಅಂತಹ ಸಂಗತಿಗಳು ಕಂಡುಬಂದರೆ ಪೋಲೀಸ್ ಇಲಾಖೆಗೆ ತಿಳಿಸುವಂತೆ ಮನವಿ ಮಾಡಿದರು.

ಗಣೇಶನ ಹಬ್ಬದ ವಿವಿಧ ಕಾರ್ಯಗಳು ಶಾಂತಿಯುತವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ರಾತ್ರಿ 10 ಗಂಟೆಯ ಒಳಗೆ ಪ್ರತಿ ದಿನದ ಕಾರ್ಯಕ್ರಮ ಮುಗಿಸಬೇಕು. ಗಣೇಶನ ವಿಗ್ರಹವನ್ನು ಇಡುವ ಚೌಕಿ ಅಥವಾ ಸಭಾ ವೇದಿಕೆಯಲ್ಲಿ ರಾತ್ರಿ ಪಾಳಿಯಲ್ಲಿ ಸ್ವಯಂ ಸೇವಕರು ಕಾಯಬೇಕು.


ಗಣೇಶ ಹಬ್ವಕ್ಕೆ ಶುಭಕೋರುವ ಬ್ಯಾನರ್ ಗಳನ್ನು ಹಾಕಿದರೆ ಎಲ್ಲೂ ಕೂಡ ಯಾವುದೇ ವಿವಾದವಾಗದಂತೆ ಜವಾಬ್ದಾರಿ ವಹಿಸಬೇಕು.
ಪಂಚಾಯತ್ ನಿಂದ, ಮೆಸ್ಕಾಂ, ಅಗ್ನಿಶಾಮಕ ದಳದ ಅನುಮತಿಯನ್ನು ಪಡೆದುಕೊಳ್ಳಿ, ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ತಾತ್ಕಾಲಿಕ ಸಿಸಿ.ಟಿ.ವಿ ಅಳವಡಿಸಿ, ಮೆರವಣಿಗೆ ವೇಳೆ ಡಿ.ಜೆ.ಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಅಪರಾಧ ವಿಭಾಗದ ಎಸ್.ಐ.ಮೂರ್ತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!