ಜನ ಮನದ ನಾಡಿ ಮಿಡಿತ

Advertisement

ಶಿಮಂತೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರ ಸಭೆ

ಶಿಮಂತೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2022-23 ನೇ ಸಾಲಿನ ಸರ್ವ ಸದಸ್ಯರ ಸಭೆ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ನಡೆದಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಪದ್ಮಿನಿ ವಿಜಯಕುಮಾರ್ ಶೆಟ್ಟಿ ವಹಿಸಿದ್ರು. ಬಳಿಕ ಅವರು ಮಾತನಾಡಿ ಕೃಷಿ ಹಾಗೂ ಹೈನುಗಾರಿಕೆಗೆ ಪ್ರೋತ್ಸಾಹ ನೀಡಿ ಸಂಘದ ಯಶಸ್ವಿಗೆ ಸದಸ್ಯರು ಕಾರಣಕರ್ತರಾಗಿದ್ದು, ಈ ಬಾರಿ ಸಂಘದ ಸದಸ್ಯರಿಗೆ ಲಾಭದ ಅಂಶದಲ್ಲಿ ಶೇ.21 ಡಿವಿಡೆಂಡ್ ನೀಡಲಾಗಿದೆ ಎಂದರು.

ಬಳಿಕ ದ.ಕ. ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸಂದೀಪ್ ಮಾತನಾಡಿ, ಕೃಷಿ ಹಾಗೂ ಹೈನುಗಾರಿಕೆ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವುದರ ಮುಖಾಂತರ ಹಾಲಿನ ಗುಣಮಟ್ಟ ಕಾಪಾಡಿಕೊಳ್ಳಬೇಕಾಗಿದೆ ಎಂದರು. ಈ ವೇಳೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಶೆಟ್ಟಿ ಲೆಕ್ಕಪತ್ರ ಮಂಡಿಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಡೈರಿಗೆ ಅತಿ ಹೆಚ್ಚು ಹಾಲು ಹಾಕಿದ ಹರಿಣಾಕ್ಷಿ (ಪ್ರ), ವಿಜಯ ಆರ್ ಶೆಟ್ಟಿ (ದ್ವಿ), ಪದ್ಮಿನಿ ವಿ. ಶೆಟ್ಟಿ(ತೃ), ಪ್ರಪುಲ್ಲಾ ಸಿ ಶೆಟ್ಟಿ (ಅತಿ ಹೆಚ್ಚು ಫ್ಯಾಟ್) ರವರಿಗೆ ಬಹುಮಾನ ನೀಡಲಾಯಿತು. ಬಳಿಕ ಕಳೆದ ಸಾಲಿನ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪೂರ್ವಿಕ ಎಚ್ ಶೆಟ್ಟಿ, ಹರ್ಷಿತಾ ಆರ್ ಶೆಟ್ಟಿ, ಉಮಾವತಿ ಯು. ಕೋಟ್ಯಾನ್ ರವರನ್ನು ಗೌರವಿಸಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!