ಜನ ಮನದ ನಾಡಿ ಮಿಡಿತ

Advertisement

ಚಾರುವಸಂತ ರಂಗ ತಾಲೀಮಿಗೆ ಚಾಲನೆ ನೀಡಿದ ಡಾ. ಎಂ.ಮೋಹನ ಆಳ್ವ

ಹಲವು ಅತ್ಯುತ್ತಮ ಕೃತಿಗಳನ್ನು ಕನ್ನಡ ನಾಡಿಗೆ ನೀಡಿದ ನಾಡೋಜ ಹಂ.ಪ.ನಾಗರಾಜಯ್ಯರವರು ನಮ್ಮ ಒಬ್ಬ ನಾಡಿನ ಶ್ರೇಷ್ಠ ಸಾಹಿತಿ.

ಹದಿನಾಲ್ಕು ಭಾಷೆಗಳಿಗೆ ಅನುವಾದಗೊಂಡಿರುವ ಅವರ ಪ್ರಸಿದ್ಧ ಕೃತಿಯಾಗಿರುವ ಚಾರುವಸಂತ ದೇಸೀ ಕಾವ್ಯವನ್ನು ರಂಗಕ್ಕೆ ತರಲು ನಮ್ಮ ಸಂಸ್ಥೆಗೆ ಬಹಳ ಹೆಮ್ಮೆ ಅನಿಸಿದೆ’ ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.


ಡಾ.ಎಂ.ಮೋಹನ ಆಳ್ವ ಅವರು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯಲಿರುವ ಚಾರುವಸಂತ ನಾಟಕದ ತಾಲೀಮನ್ನು ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೇಲ್ ನಲ್ಲಿ ನಾಟಕದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.


ಮುಖ್ಯ ಅತಿಥಿಗಳಾಗಿದ್ದ ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ ಮಾತನಾಡಿ ‘ ನನ್ನ ಗುರುಗಳ ಕೃತಿಯೊಂದು ರಂಗಕೃತಿಯಾಗುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ. ಹಲವು ಮಹತ್ವದ ರಂಗ ಪ್ರಯೋಗಗಳನ್ನು ರಂಗಕ್ಕೆ ತಂದಿರುವ ಡಾ.ಜೀವನ್ ರಾಂ ಸುಳ್ಯರ ನಿರ್ದೇಶನದಲ್ಲಿ ಈ ಚಾರುವಸಂತವು ಕನ್ನಡ ರಂಗಭೂಮಿಯಲ್ಲಿ ಹೊಸ ಸಂಚಲನ ಮೂಡಿಸಲಿ’ ಎಂದು ಶುಭ ಹಾರೈಸಿದರು.


ಕೃತಿಕಾರ ನಾಡೋಜ ಹಂ.ಪ.ನಾಗರಾಜಯ್ಯ ಚಾರುವಸಂತದ ರಂಗರೂಪವನ್ನು ಸಿದ್ಧ ಪಡಿಸಿದ ಸಾಹಿತಿ, ರಂಗಕರ್ಮಿ ಡಾ.ನಾ.ದಾ.ಶೆಟ್ಟಿ ಅವರ ಶ್ರಮವನ್ನು ಶ್ಲಾಘಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರ ಜೊತೆ ನೀನಾಸಂ ರಂಗಾಯಣಗಳಲ್ಲಿ ಅನುಭವ ಪಡೆದ ಕೆಲವು ಕಲಾವಿದರೂ ಪಾತ್ರವಹಿಸಲಿದ್ದು ಅಕ್ಟೋಬರ್ ಕೊನೆಯ ವಾರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ನಾಟಕದ ನಿರ್ದೇಶಕ ಜೀವನ್ ರಾಂ ಸುಳ್ಯ ತಿಳಿಸಿದರು.‌

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!