ಜನ ಮನದ ನಾಡಿ ಮಿಡಿತ

Advertisement

ನಾಟಕ ಪ್ರದರ್ಶನದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದ ಕಲಾವಿದ

ನಾಟಕ ಪ್ರದರ್ಶನದ ವೇಳೆ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ.

ಶರಣು ಬಾಗಲಕೋಟೆ (24) ಎಂಬ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದು, ವೃತ್ತಿಯಲ್ಲಿ ಪೋಸ್ಟ್ ಮ್ಯಾನ್ ಕೆಲಸ ನಿರ್ವಹಿಸುತ್ತಿದ್ದನು.

ಶರಣು ಕೊಟ್ಯಾಳ್ ‘ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ’ ನಾಟಕ ಪ್ರದರ್ಶನ ವೇಳೆ ಡ್ಯಾನ್ಸ್​ ಮಾಡಲು ಮುಂದಾಗಿದ್ದು, ಈ ವೇಳೆ ವೇದಿಕೆಯ ಮೇಲೆಯೇ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾನೆ.

ಸಾವನ್ನಪ್ಪಿದ ಶರಣು ಕೊಟ್ಯಾಳ್ ಇತ್ತೀಚೆಗೆ ಪೋಸ್ಟ್ ಮ್ಯಾನ್ ಆಗಿ ನೇಮಕಗೊಂಡಿದ್ದ. ಗ್ರಾಮ ದೇವರ ಜಾತ್ರೆ ಹಿನ್ನೆಲೆ ಹಮ್ಮಿಕೊಳ್ಳಲಾಗಿದ್ದ ನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ. ತಾನು ಸಹ ನಾಟಕದಲ್ಲಿ ಡ್ಯಾನ್ಸ್ ಮಾಡಲು ವೇದಿಕೆ ಏರಿದ್ದ. ಈ ವೇಳೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದಿದ್ದಾನೆ.

ವೇದಿಕೆ ಕೆಳಗೆ ಕುಳಿತು ನಾಟಕ ನೋಡುತ್ತಿದ್ದ ಗ್ರಾಮಸ್ಥರಲ್ಲೂ ಆತಂಕ ಸೃಷ್ಟಿಸಿದೆ.

ಇನ್ನು ಶರಣು ಕೊಟ್ಯಾಳ್​ಗೆ ಹೃದಯಾಘಾತವಾಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!