ಜನ ಮನದ ನಾಡಿ ಮಿಡಿತ

Advertisement

ಜಮ್ಮು- ಕಾಶ್ಮೀರದಲ್ಲಿ ಮುಂದುವರೆದ ಗುಂಡಿನ ಚಕಮಕಿ; ಇಬ್ಬರಿಗೆ ಗಾಯ, ಒರ್ವ ಯೋಧ ನಾಪತ್ತೆ..!!

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ 48 ಗಂಟೆಗಳ ಕಾಲ ನಡೆಯುತ್ತಿರುವ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಇದೀಗ ಯೋಧನೊಬ್ಬ ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕೋಕರ್‌ನಾಗ್‌ನ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರನ್ನು ಬೇಟೆಯಾಡಲು ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ ನಂತರ ಬುಧವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭಾರತೀಯ ಸೇನೆಯ ಕರ್ನಲ್ ಸೇರಿದಂತೆ ಭದ್ರತಾ ಪಡೆಯ ಮೂವರು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇನ್ನು ಈ ದಾಳಿಯಲ್ಲಿ ಭಯೋತ್ಪಾದಕರ ಕಡೆಯಿಂದ ಗಾಯಗೊಂಡಿರುವ ಅಂಕಿ ಅಂಶಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸೇನೆಯ ಭದ್ರತಾ ಪಡೆಗಳು ತಮ್ಮ ತೀವ್ರವಾದ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಗಳಲ್ಲಿ ಹೆರಾನ್ ಡ್ರೋನ್‌ಗಳು ಸೇರಿದಂತೆ ಹೊಸ ಹೊಸ ಮಾದರಿಯ ಶಸ್ತ್ರಾಸ್ತ್ರಗಳು ಮತ್ತು ಸಾಧನಗಳನ್ನು ಬಳಸುತ್ತಿದೆ.


ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೇರಿಕೊಂಡು ತಮ್ಮ ಜಂಟಿ ಶೋಧ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 12-13 ರ ರಾತ್ರಿ ಪ್ರಾರಂಭಿಸಿದ್ರು. ಇವರು ಗರೋಲ್ ಗ್ರಾಮದಲ್ಲಿ ಕೆಲವು ಅಡಗಿಕೊಂಡಿರುವ ಭಯೋತ್ಪಾದಕರ ಹುಡುಕಾಟದಲ್ಲಿ ಸುತ್ತುವರಿದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ನಡೆದ ಎನ್‌ಕೌಂಟರ್‌ನಲ್ಲಿ 19 ರಾಷ್ಟ್ರೀಯ ರೈಫಲ್ಸ್ ಘಟಕದ ಕಮಾಂಡರ್‌ಗಳಾದ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಉಪ ಅಧೀಕ್ಷಕ ಹುಮಾಯೂನ್ ಭಟ್ ಹುತಾತ್ಮರಾಗಿದ್ದರು. ಮಂಗಳವಾರ ಸಂಜೆ ಆನಂದ್ ನಾಗ್‌ನ ಗಾಡೋಲ್ ಪ್ರದೇಶದಲ್ಲಿ ಆರಂಭವಾದ ಎನ್‌ಕೌಂಟರ್ ರಾತ್ರಿಯ ವೇಳೆಗೆ ಕೊನೆಗೊಂಡಿತು. ಭಯೋತ್ಪಾದಕರ ಅಡಗುತಾಣ ಪತ್ತೆಯಾದ ಬಳಿಕ ಬುಧವಾರ ಬೆಳಗ್ಗೆ ಮತ್ತೆ ಶೋಧ ಕಾರ್ಯ ಆರಂಭವಾಯಿತು. ಇದೇ ವೇಳೆ ಉಗ್ರರು ಸೇನೆಯ ಅಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಗಂಭೀರ ಗಾಯಗೊಂಡ ಮೂವರೂ ಸಾವನ್ನಪ್ಪಿದ್ದಾರೆ.


ಈ ಎನ್​ಕೌಂಟರ್​ನಲ್ಲಿ ಮನ್​ಪ್ರೀತ್ ಸಿಂಗ್, ಮೇಜರ್ ಅಶಿಶ್ ಧೋಂಚಕ್​, ಡಿಎಸ್​ಪಿ ಜಮ್ಮು ಮತ್ತು ಕಾಶ್ಮೀರ್​ ಪೊಲೀಸ್​ ಹಿಮಾಯಯನ್ ಭಟ್​ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಟ್​ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಈ ಎನ್​ಕೌಂಟರ್​ಗೂ ಮುನ್ನ ಮಂಗಳವಾರ ಜಮ್ಮು ಕಾಶ್ಮೀರದ ರಜೌರಿಯಲ್ಲೂ ಭಯೋತ್ಪಾಧಕರು ಮತ್ತು ಸೇನೆ ನಡುವೆ ಎನ್​ಕೌಂಟರ್ ನಡೆದಿತ್ತು.
ಇದರಲ್ಲಿ ತನ್ನ ಹ್ಯಾಂಡ್ಲರ್ ರಕ್ಷಿಸಿದ್ದ 6 ವರ್ಷದ ಕೆಂಟ್ ಎಂಬ ಶ್ವಾನ ತನ್ನ ಪ್ರಾಣ ಬಿಟ್ಟಿತ್ತು. ಮೂರು ದಿನಗಳ ಕಾಲ ನಡೆದ ಎನ್​ಕೌಂಟರ್​ನಲ್ಲಿ ಒಬ್ಬ ಯೋಧ ಹುತಾತ್ಮರಾದರೆ, 3 ಉಗ್ರರನ್ನು ಸೇನೆ ಹೊಡೆದುರುಳಿಸಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!