ಜನ ಮನದ ನಾಡಿ ಮಿಡಿತ

Advertisement

“ಶಾಸಕರ ನೂತನ ಕಚೇರಿಗೆ ಪುತ್ತೂರು ನಗರಸಭಾ ನಿಧಿಯ ದುರುಪಯೋಗವಾಗಿದೆ” ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ, ಡಿ.ಸಿಗೆ ಮನವಿ

ಪುತ್ತೂರು: ಶಾಸಕರ ನೂತನ ಕಚೇರಿಗೆ ಪುತ್ತೂರು ನಗರಸಭಾ ನಿಧಿಯ ದುರುಪಯೋಗವಾಗಿದೆ ಮತ್ತು ನಗರಸಭೆಯ ನಗರೋತ್ಥಾನದ ವಿವಿಧ ಕಾಮಗಾರಿ ವಿಳಂಬ ಸಹಿತ ನಗರಸಭೆ 2 ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಇನ್ನೂ ಆಗಿಲ್ಲ ಎಂದು ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಪುತ್ತೂರಿನಲ್ಲಿ ಮನವಿ ಮಾಡಿದ್ದಾರೆ.


ಪುತ್ತೂರು ತಾಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಯವರು ಸೆ.15 ರಂದು ಆಗಮಿಸಿದ ವೇಳೆ ಸದಸ್ಯರು ಮನವಿ ಮಾಡಿದ್ದಾರೆ.

ಪುತ್ತೂರು ಶಾಸಕರು ನಮ್ಮ ನಗರ ಸಭೆಯ ಕಟ್ಟಡದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಕಚೇರಿಯನ್ನು ಅಲ್ಲಿಂದ ತೆರವುಗೊಳಿಸಿ ತಮ್ಮ ಶಾಸಕರ ಕೊಠಡಿಯನ್ನಾಗಿ ತಮ್ಮ ಮೂಲಕ ಪರಿವರ್ತಿಸಿರುತ್ತಾರೆ, ಅಲ್ಲದೆ ಸದ್ರಿ ಕಚೇರಿಯ ನವೀಕರಣಕ್ಕೆ, ಸುಮಾರು 31 ಲಕ್ಷ ರೂಪಾಯಿಗಳನ್ನು ಸಾರ್ವಜನಿಕರ ತೆರಿಗೆ ಹಣವನ್ನು ನಗರಸಭಾ ನಿಧಿಯಿಂದ ನೀಡುವಂತೆ ತಮ್ಮ ಮೂಲಕ ಆದೇಶ ನೀಡಲಾಗಿದೆ.

ಈ ರೀತಿ ನಾಗರಿಕರಿಂದ ಸಂಗ್ರಹವಾದ ತೆರಿಗೆ ಹಣವನ್ನು ನಗರಸಭಾ ನಿಧಿಯಿಂದ ಶಾಸಕರ ಐಷಾರಾಮಿ ಕಚೇರಿಯ ಅಭಿವೃದ್ಧಿಗೆ ನೀಡಲು ಚುನಾಯಿತ ಸದಸ್ಯರುಗಳಾದ ನಮ್ಮ ಆಕ್ಷೇಪವಿರುತ್ತದೆ. ಅದಲ್ಲದೇ ಈ ಹಿಂದಿನ ಅವಧಿಯಲ್ಲಿ ಮಂಜೂರಾದ ಅಮೃತ ನಗರೋತ್ಥಾನದ ಕಾಮಗಾರಿಗಳು ಆರಂಭವಾಗಿರುವುದಿಲ್ಲ.

ನಗರಸಭೆಯ ಎರಡನೆಯ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ತೊಡಕು ಇನ್ನೂ ನಿವಾರಣೆಯಾಗಿರುವುದಿಲ್ಲ. ಆದ್ದರಿಂದ ತಾವು ಈ ಎಲ್ಲಾ ವಿಚಾರಗಳ ಬಗ್ಗೆ ವರಿಶೀಲಿಸಿ ಚುನಾಯಿತ ಸದಸ್ಯರಾದ ನಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.


ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ ಜೀವಂಧರ್ ಜೈನ್, ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಗೌರಿ, ಸದಸ್ಯರಾದ ಪಿ ಜಿ ಜಗನ್ನಿವಾಸ ರಾವ್, ಭಾಮಿ ಅಶೋಕ್ ಶೆಣೈ, ಮನೋಹರ್ ಕಲ್ಲಾರೆ, ನವೀನ್ ಪೆರಿತ್ತೋಡಿ, ಪ್ರೇಮ್, ಸಂತೋಷ್ ಬೊಳುವಾರು, ಸುಂದರ ಪೂಜಾರಿ ಬಡಾವು, ಶೀನಪ್ಪ ನಾಯ್ಕ್, ಪದ್ಮನಾಭ ಪಡೀಲ್ , ವಸಂತ ಕಾರೆಕ್ಕಾಡು, ಬಾಲಚಂದ್ರ, ಶಶಿಕಲಾ ಸಿ.ಎಸ್, ಪ್ರೇಮಲತಾ ನಂದಿಲ, ಮೋಹಿನಿ ವಿಶ್ವನಾಥ್, ಮಮತಾ ರಂಜನ್, ಯಶೋದಾ ಹರೀಶ್, ಗೌರಿ ಬನ್ನೂರು, ಲೀಲಾವತಿ, ದೀಕ್ಷಾ ಪೈ, ಇಂದಿರಾ, ರೋಹಿಣಿ ಈ ಸಂದರ್ಭ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!