ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ 100 ಅಡಿ ಪ್ರಪಾತಕ್ಕೆ ಲಾರಿಯೊಂದು ಬಿದ್ದಿದ್ದು, ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೇ ಲಾರಿ ಪಲ್ಟಿಯಾಗಿದ್ದು, ಪ್ರಪಾತಕ್ಕೆ ಬೀಳುತ್ತಿದ್ದಂತೆಯೇ ಲಾರಿ ಮರಕ್ಕೆ ಬಡಿದು ಸಿಕ್ಕಿಹಾಕಿಕೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಅಲ್ಲಿಗೆ ಆಗಮಿಸಿ ಚಾಲಕ ಮತ್ತು ಕ್ಲೀನರ್ನನ್ನು ರಕ್ಷಿಸಿದ್ದಾರೆ. ಈ ಮೂಲಕ ಪ್ರಾಣಸಂಕಟಕ್ಕೆ ಸಿಲುಕಿದ್ದ ಇಬ್ಬರ ಜೀವವನ್ನು ಮರ ಉಳಿಸಿದೆ.
ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ ಎಂದು ತಿಳಿದು ಬಂದಿದೆ. ಇನ್ನೂ ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



