ಜನ ಮನದ ನಾಡಿ ಮಿಡಿತ

Advertisement

ಕೇಂದ್ರ ಸರ್ಕಾರದ “ಪಿಎಂ ವಿಶ್ವಕರ್ಮ” ಯೋಜನೆಗೆ ಚಾಲನೆ ನೀಡಿದ ಸಚಿವ ಪರ್ಷೋತ್ತಮ್ ರೂಪಾಲಾ

ಸಾಂಪ್ರದಾಯಿಕ ಕಸುಬುಗಳ ಮೂಲಕ ದೇಶಕ್ಕೆ ಕೊಡುಗೆ ಕೊಟ್ಟ ಕುಶಲಕರ್ಮಿಗಳು ಮತ್ತೆ ಮುನ್ನಲೆಗೆ ಬರಲಿದ್ದಾರೆ: ಶಾಸಕ ವೇದವ್ಯಾಸ್ ಕಾಮತ್

ಸ್ವಾತಂತ್ರ್ಯ ಪೂರ್ವದಿಂದಲೂ ದೇಶದ ಏಳಿಗೆಗೆ ತಮ್ಮದೇ ಆದ ಸಾಂಪ್ರದಾಯಿಕ ಕಸಬುಗಳ ಮೂಲಕ ಅಮೂಲ್ಯ ಕೊಡುಗೆಯನ್ನು ಕೊಟ್ಟಿರುವ ಕರ ಕುಶಲಕರ್ಮಿಗಳನ್ನು ಮತ್ತೆ ಜಾಗತಿಕ ಮುನ್ನಲೆಗೆ ತರುವ ನಿಟ್ಟಿನಲ್ಲಿ ಭಗವಾನ್ ವಿಶ್ವಕರ್ಮ ಜಯಂತಿಯಂದು “ಪಿಎಂ ವಿಶ್ವಕರ್ಮ” ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು

ಕೇಂದ್ರ ಸರ್ಕಾರದ “ಪಿಎಂ ವಿಶ್ವಕರ್ಮ” ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವರಾದ ಪರ್ಷೋತ್ತಮ್ ರೂಪಾಲಾರವರ ಜೊತೆಗೆ ನಗರದ ಕಾರ್ ಸ್ಟ್ರೀಟ್ ಭಾಗದಲ್ಲಿರುವ ಕಾಳಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಜಿಲ್ಲಾಡಳಿತದ ವತಿಯಿಂದ ನಡೆಯಲಿದ್ದ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ತೆರಳಿದರು.

ಈ ವೇಳೆ ಆಹ್ವಾನವೇ ಇಲ್ಲದಿದ್ದರೂ ಕೇಂದ್ರ ಸಚಿವರಾದ ಪರ್ಷೋತ್ತಮ್ ರೂಪಾಲಾರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಆದರೆ ಮುಖ್ಯವಾಗಿ ಉಪಸ್ಥಿತರಿರಬೇಕಿದ್ದ ಜಿಲ್ಲೆಯ ಉಸ್ತುವಾರಿ ಸಚಿವರೇ ಇರಲಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಬಿಟ್ಟರೆ ಸರ್ಕಾರದ ಬೇರಾವುದೇ ಪ್ರತಿನಿಧಿಗಳು ಇರಲಿಲ್ಲ. ಶಿಷ್ಟಾಚಾರದ ಪ್ರಕಾರ ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ಸರ್ಕಾರದ ಬೇಜವಾಬ್ದಾರಿ ಎದ್ದು ಕಾಣಿಸುತ್ತಿತ್ತು. ಇದು ಅತ್ಯಂತ ಬೇಸರದ ಸಂಗತಿ ಎಂದು ತಿಳಿಸಿದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!