ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ತಾಲೂಕು ಆಡಳಿತ ಸೌಧದಿಂದ ವಿಶ್ವಕರ್ಮ ಜಯಂತಿ ಆಚರಣೆ

ಮೂಡುಬಿದಿರೆ: ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಭಾನುವಾರ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು.


ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಅವರು ವಿಶ್ವಕರ್ಮ ಜಯಂತಿಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿ ಬ್ರಹ್ಮಾಂಡವನ್ನು ಸೃಷ್ಟಿಸಿದ್ದು ವಿಶ್ವಕರ್ಮ. ಶಿಲ್ಪವೃತ್ತಿಯೆಂಬುದು ಕೇವಲ ವೃತ್ತಿಯಲ್ಲ. ನಿಸ್ತೇಜ ವಸ್ತುಗಳಿಗೆ ಜೀವ ತುಂಬುವ ಆ ವೃತ್ತಿಯೊಂದಿಗೆ ಆಧ್ಯಾತ್ಮ, ಕೌಶಲ್ಯ, ತ್ಯಾಗ, ತಪಸ್ಸಿನ ಗುಣ ಮಿಳಿತಗೊಂಡಿದೆ ಎಂದರು. ವಿಜ್ಞಾನ ತಂತ್ರಜ್ಞಾನದಲ್ಲಿ ನಾವೆಷ್ಟೇ ಮುಂದುವರಿದಿದ್ದರೂ ಬ್ರಹ್ಮಾಂಡದ ಸೃಷ್ಟಿಯ ಬಗ್ಗೆ ಕುತೂಹಲವಿದೆ. ವಿಶ್ವಕರ್ಮನು ಶೋಧನೆ ಮಾಡಿದಷ್ಟು ಆಧ್ಯಾತ್ಮದತ್ತ ಸೆಳೆಯುತ್ತದೆ. ಎಲ್ಲಾ ದೇವರಿಗೆ ಮೂರ್ತರೂಪವನ್ನು ನೀಡಿದ್ದು ವಿಶ್ವಕರ್ಮ, ವಿಶ್ವಕರ್ಮರೇ ಸನಾತನ ಸಂಸ್ಕೃತಿಯ ಮೂಲವಾಗಿದ್ದಾರೆ ಎಂದ ಅವರು ಪರಂಪರೆಯಲ್ಲಿ, ಇತಿಹಾಸದಲ್ಲಿ ಭವ್ಯತೆಯನ್ನು ಹೊಂದಿರುವ ವಿಶ್ವಕರ್ಮ ಸಮುದಾಯದ ವೃತ್ತಿಗಳಿಗೆ ಭವಿಷ್ಯದ ಉದ್ಯಮರಂಗದಲ್ಲಿ ವಿಫುಲ ಅವಕಾಶಗಳಿವೆ ಎಂದರು.


ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.
ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅಧ್ಯಕ್ಷತೆ ವಹಿಸಿ, ದಾರ್ಶನಿಕರು, ಮಹಾಪುರುಷರ ಚಿಂತನೆಗಳನ್ನು ಅನುಸರಿಸುವುದು ಮುಖ್ಯ. ಸರಕಾರವು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇವುಗಳು ಜಾತಿ ಮತ ಧರ್ಮವನ್ನು ಮೀರಿದ ಆಚರಣೆಗಳಾಗಬೇಕಾದುದು ಔಚಿತ್ಯ ಪೂರ್ಣ ಎಂದರು.

ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಶಿವರಾಮ ಆಚಾರ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸತೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಡೆಪ್ಯೂಟಿ ತಹಸೀಲ್ದಾರ್ ರಾಮ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!