ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ತಾಲೂಕು ಆಡಳಿತ ಸೌಧದಿಂದ ವಿಶ್ವಕರ್ಮ ಜಯಂತಿ ಆಚರಣೆ

ಮೂಡುಬಿದಿರೆ: ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಭಾನುವಾರ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು.


ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಅವರು ವಿಶ್ವಕರ್ಮ ಜಯಂತಿಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿ ಬ್ರಹ್ಮಾಂಡವನ್ನು ಸೃಷ್ಟಿಸಿದ್ದು ವಿಶ್ವಕರ್ಮ. ಶಿಲ್ಪವೃತ್ತಿಯೆಂಬುದು ಕೇವಲ ವೃತ್ತಿಯಲ್ಲ. ನಿಸ್ತೇಜ ವಸ್ತುಗಳಿಗೆ ಜೀವ ತುಂಬುವ ಆ ವೃತ್ತಿಯೊಂದಿಗೆ ಆಧ್ಯಾತ್ಮ, ಕೌಶಲ್ಯ, ತ್ಯಾಗ, ತಪಸ್ಸಿನ ಗುಣ ಮಿಳಿತಗೊಂಡಿದೆ ಎಂದರು. ವಿಜ್ಞಾನ ತಂತ್ರಜ್ಞಾನದಲ್ಲಿ ನಾವೆಷ್ಟೇ ಮುಂದುವರಿದಿದ್ದರೂ ಬ್ರಹ್ಮಾಂಡದ ಸೃಷ್ಟಿಯ ಬಗ್ಗೆ ಕುತೂಹಲವಿದೆ. ವಿಶ್ವಕರ್ಮನು ಶೋಧನೆ ಮಾಡಿದಷ್ಟು ಆಧ್ಯಾತ್ಮದತ್ತ ಸೆಳೆಯುತ್ತದೆ. ಎಲ್ಲಾ ದೇವರಿಗೆ ಮೂರ್ತರೂಪವನ್ನು ನೀಡಿದ್ದು ವಿಶ್ವಕರ್ಮ, ವಿಶ್ವಕರ್ಮರೇ ಸನಾತನ ಸಂಸ್ಕೃತಿಯ ಮೂಲವಾಗಿದ್ದಾರೆ ಎಂದ ಅವರು ಪರಂಪರೆಯಲ್ಲಿ, ಇತಿಹಾಸದಲ್ಲಿ ಭವ್ಯತೆಯನ್ನು ಹೊಂದಿರುವ ವಿಶ್ವಕರ್ಮ ಸಮುದಾಯದ ವೃತ್ತಿಗಳಿಗೆ ಭವಿಷ್ಯದ ಉದ್ಯಮರಂಗದಲ್ಲಿ ವಿಫುಲ ಅವಕಾಶಗಳಿವೆ ಎಂದರು.


ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.
ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅಧ್ಯಕ್ಷತೆ ವಹಿಸಿ, ದಾರ್ಶನಿಕರು, ಮಹಾಪುರುಷರ ಚಿಂತನೆಗಳನ್ನು ಅನುಸರಿಸುವುದು ಮುಖ್ಯ. ಸರಕಾರವು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇವುಗಳು ಜಾತಿ ಮತ ಧರ್ಮವನ್ನು ಮೀರಿದ ಆಚರಣೆಗಳಾಗಬೇಕಾದುದು ಔಚಿತ್ಯ ಪೂರ್ಣ ಎಂದರು.

ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಶಿವರಾಮ ಆಚಾರ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸತೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಡೆಪ್ಯೂಟಿ ತಹಸೀಲ್ದಾರ್ ರಾಮ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!