ಜನ ಮನದ ನಾಡಿ ಮಿಡಿತ

Advertisement

ಜೇಸಿ ಸಪ್ತಾಹ 2023-ಚೈತ್ರ ಸಮಾರೋಪ ; ಪ್ರಭಾತ್ ಬಲ್ನಾಡು ಮತ್ತು ಮಾಕ್೯ ಮೆಂಡೋನ್ಸಾರಿಗೆ ಕಮಲಪತ್ರ ಪ್ರದಾನ

ಮೂಡಬಿದಿರೆ :ಜೇಸಿಐ ಮೂಡುಬಿದಿರೆ ತ್ರಿಭುವನ್ ಇದರ ವತಿಯಿಂದ ಜೇಸಿ ಸಪ್ತಾಹದಂಗವಾಗಿ 7 ದಿನಗಳ ಕಾಲ ನಡೆದ ವಿವಿಧ ಕಾರ್ಯಗಳು ನಿಶ್ಮಿತಾ ಟವರ್ಸ್ ನ ಪ್ಯಾರಾಡೈಸ್ ಹಾಲ್ ನಲ್ಲಿ ಸಮಾರೋಪಗೊಂಡಿತು.


ಜೇಸಿಐ ಅಧ್ಯಕ್ಷ ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೇಸಿ ಪ್ರಭಾತ್ ಬಲ್ನಾಡು ಮತ್ತು ಮಾರ್ಕ್ ಮೆಂಡೊನ್ಸಾ ಇವರಿಗೆ ಕಮಲ ಪತ್ರ ನೀಡಿ ಗೌರವಿಸಲಾಯಿತು.

ರೋಟರಿ ಕ್ಲಬ್ ನ ಅಧ್ಯಕ್ಷ ನಾಗರಾಜ ಬಿ.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಜೇಸಿ ಸಂಸ್ಥೆಯು ಉತ್ತಮ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳನ್ನು ಗುರುತಿಸಿ ಗೌರವಿಸುವ ಮೂಲಕ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಸಂಸ್ಥೆಯೂ ಮುಂದೆಯೂ ತರಬೇತಿಗಳನ್ನು ನೀಡುವ ಮೂಲಕ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಜೇಸಿಯ ಪೂರ್ವಾಧ್ಯಕ್ಷ ಅಬುಲ್ ಅಲಾ ಪುತ್ತಿಗೆ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಯುವ ಜನಾಂಗವು ಇಂದು ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇಂತಹ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಸರಿದಾರಿಗೆ ತರುವಂತಹ ಕೆಲಸಗಳಾಗಬೇಕಿದೆ. ಜೇಸಿ ಸಂಸ್ಥೆ ನಮಗೇನು ನೀಡಿದೆ ಎನ್ನುವುದಕ್ಕಿಂತಲೂ ನಾವು ನಮ್ಮನ್ನು ಅದರಲ್ಲಿ ಯಾವ ರೀತಿ ತೊಡಗಿಸಿಕೊಂಡಿದ್ದೇವೆ ಎನ್ನುವುದು ಮುಖ್ಯ. ನಾವು ಸಂಪೂರ್ಣವಾಗಿ ಅದರಲ್ಲಿ ತೊಡಗಿಸಿಕೊಂಡರೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಲು ಸಾಧ್ಯವಿದೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಯಶೋಧ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೀತಾರಾಮ ಆಚಾರ್ಯ, ಸಮಾಜ ಸೇವೆಯಲ್ಲಿ ಪುರಂದರ ಆರ್. ದೇವಾಡಿಗ, ತುಳು ರಂಗಭೂಮಿ ಕ್ಷೇತ್ರದಲ್ಲಿ ಉಮೇಶ್ ಮಿಜಾರ್ ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಸಮಾಜ ಸೇವಾ ಕಾರ್ಯಕ್ರಮಗಳನ್ನು ಗುರುತಿಸಿ ವೇಣೂರು ಕ್ರಿಸ್ತರಾಜ ನವಚೇತನ ಸ್ಕೂಲ್, ಪವರ್ ಫ್ರೆಂಡ್ಸ್ ಬೆದ್ರ, ನವಚೇತನ ಸೇವಾ ಬಳಗ(ರಿ.) ತೋಡಾರು, ಮೂಡುಬಿದಿರೆ ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಸಂಸ್ಥೆಯನ್ನು ಗೌರವಿಸಲಾಯಿತು.
ಜೇಸಿ ಶ್ರವಣ್ ಮತ್ತು ಜೇಸಿ ಫರಾಜ್ ಬೆದ್ರ ಅವರಿಗೆ ಘಟಕದ ವತಿಯಿಂದ ‘ಕ್ರಿಯಾಶೀಲ ಯುವ ವ್ಯಕ್ತಿ’ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಇನ್ನೂ ಈ ಸಂದರ್ಭದಲ್ಲಿ ಜೇಸಿ ಅನಂತವೀರ್ ಜೈನ್, ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷ ಮಹಮ್ಮದ್ ಆರೀಫ್, ಐಪಿಪಿ ಶಾಂತಲಾ ಎಸ್.ಆಚಾರ್ಯ, ಮಹಿಳಾ ಜೇಸಿ ಸಂಯೋಜಕಿ ಮಲ್ಲಿಕಾ, ಕಾರ್ಯದರ್ಶಿ ಆಶ್ರಿತಾ ಎಸ್.ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!