ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪತಿಯ ಮೈಮೇಲೆ ಮೆಣಸಿನ ಹುಡಿ ಹಾಕಿ ಕುದಿಯುವ ನೀರು ಎರಚಿದ ಪತ್ನಿ!!!

ಉಡುಪಿ: ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪರಿಣಾಮ ಪತಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮೊಹಮ್ಮದ್ ಅಶ್ರಫ್ (22) ಗಾಯಗೊಂಡ ವ್ಯಕ್ತಿ. ಮೊಹಮ್ಮದ್ ಅಶ್ರಫ್ ಗೆ ಅವರ ಪತ್ನಿ ಅಫ್ರೀನ್, ಅತ್ತೆ, ಮಾವ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮೊಹಮ್ಮದ್‌ ಆಸೀಫ್‌ ಅವರ ಎಡ ಬದಿಯ ಮುಖ, ದೇಹ, ಎಡಗೈ, ಎಡ ಬದಿಯ ಎದೆ, ಬೆನ್ನು ಬಲಕೈ ಗೆ ಗುಳ್ಳೆ ಎದ್ದಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೊಹಮ್ಮದ್‌ ಆಸೀಫ್‌ ಕಾರ್ಕಳ ತಾಲೂಕಿನವರಾಗಿದ್ದು 11 ತಿಂಗಳ ಹಿಂದೆ ಉಡುಪಿ ತಾಲೂಕು ಮಣಿಪುರ ಗ್ರಾಮದ ಗುಜ್ಜಿ ಎಂಬಲ್ಲಿನ ನಿವಾಸಿ ಅಫ್ರೀನ್‌ ಅವರನ್ನು ಮದುವೆಯಾಗಿದ್ದರು. ಮದುವೆಯಾದ ಬಳಿಕ ಅಫ್ರೀನ್‌ ಳು ಒಂದೂವರೆ ತಿಂಗಳು ಗಂಡನ ಮನೆಯಲ್ಲಿದ್ದು, ಬಳಿಕ ಅಲ್ಲಿ ಇರಲು ಇಷ್ಟವಿಲ್ಲವೆಂದು ಮಣಿಪುರದ ತನ್ನ ತವರು ಮನೆಗೆ ಬಂದಿದ್ದಳು. ಗಂಡ ಮೊಹಮ್ಮದ್‌ ಆಸೀಫ್‌ ಕೂಡಾ ತನ್ನ ಮನೆಯಲ್ಲಿಯೇ ಇರ ಬಹುದೆಂದು ತಿಳಿಸಿದ ಮೇರೆಗೆ ಅವರು ಸುಮಾರು 9 ತಿಂಗಳುಗಳಿಂದ ಹೆಂಡತಿಯ ಮನೆಯಲ್ಲಿಯೇ ವಾಸವಿದ್ದಾರೆ. ಅಫ್ರೀನ್‌ ಳಿಗೆ ಗಂಡ ಮೊಹಮ್ಮದ್‌ ಆಸೀಫ್‌ ಗೆ ಬೇರೆ ಹುಡುಗಿಯ ಜತೆ ಸಂಬಂಧ ಇದೆ ಎಂಬ ಅನುಮಾನವಿದ್ದು, ಈ ಬಗ್ಗೆ ಯಾವಾಗಲೂ ಗಂಡನ ಜತೆ ಜಗಳವಾಡುತ್ತಿದ್ದಳು.

ಸೆ. 17 ರಂದು ಸಂಜೆ 6:45 ಗಂಟೆಗೆ ಮೊಹಮ್ಮದ್‌ ಆಸೀಫ್‌ ಬಾತ್‌ ರೂಮ್‌ ನಲ್ಲಿ ಸ್ನಾನ ಮಾಡುತ್ತಿದ್ದ ಸಮಯ ಪತ್ನಿ ಅಫ್ರೀನ್‌ ಹೊರಗಿನಿಂದ ಬಾಗಿಲು ಬಡಿದಿದ್ದು, ಮೊಹಮ್ಮದ್‌ ಆಸೀಫ್‌ ಬಾಗಿಲನ್ನು ತೆರೆದಾಗ ಆಕೆ ತನ್ನ ಕೈಯಲ್ಲಿದ್ದ ಸ್ಟೀಲಿನ ಪಾತ್ರೆಯಲ್ಲಿದ್ದ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಗಂಡನ ಮೈ ಮೇಲೆ ಎರಚಿದ್ದಾಳೆ. ಮೊಹಮ್ಮದ್‌ ಆಸೀಫ್‌ ಕೂಗಾಡುತ್ತಾ ಮನೆಯಿಂದ ಹೊರಗಡೆ ಓಡಿದ್ದು, ಆಗ ಮಾವ ಹುಸೈನ್‌ ಅವರು ಮೊಹಮ್ಮದ್‌ ಆಸೀಫ್‌ ಅವರನ್ನು ಸಮಧಾನಪಡಿಸಿ ಮನೆಯೊಳಗೆ ಕರೆದುಕೊಂಡು ಹೋಗಿದ್ದಾರೆ.

ಮೈಮೇಲೆ ಬಿಸಿ ನೀರನ್ನು ಹಾಕಿದ ಪರಿಣಾಮ ಮೊಹಮ್ಮದ್‌ ಆಸೀಫ್‌ ಅವರ ದೇಹದಲ್ಲಿ ಗುಳ್ಳೆ ಎದ್ದಿದ್ದು, ಈ ಬಗ್ಗೆ ಆಸ್ಪತ್ರೆಗೆ ಹೋಗುತ್ತೇನೆಂದು ತಿಳಿಸಿದಾಗ ಅಫ್ರೀನ್‌, ಅತ್ತೆ ಮೈಮುನಾ, ಮಾವ ಹುಸೈನ್‌ ಹಾಗೂ ನೆರೆಮನೆಯ ಲತೀಫ್‌ ಆವರು ಸೇರಿ ಹೊರಗಡೆ ಹೋಗಲು ಬಿಡದೆ ಅವರನ್ನು ಮನೆಯ ರೂಮಿನಲ್ಲಿಯೇ ಕೂಡಿ ಹಾಕಿರುತ್ತಾರೆ. ಅಲ್ಲದೆ ಅಫ್ರೀನ್‌ಳು ಮೊಹಮ್ಮದ್‌ ಆಸೀಫ್‌ ರವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಳೆ.
ಕಾಪು ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!