ಜನ ಮನದ ನಾಡಿ ಮಿಡಿತ

Advertisement

ಡಿಸೆಂಬರ್ 24ರಂದು ಮುಲ್ಕಿ ಸೀಮೆಯ ಅರಸು ಕಂಬಳ; ದುಗ್ಗಣ್ಣ ಸಾವಂತರು

ಮುಲ್ಕಿ:2023ನೇ ಸಾಲಿನ ಮುಲ್ಕಿ ಸೀಮೆ ಅರಸು ಕಂಬಳದ ದಿನಾಂಕವನ್ನು ನಿರ್ಧರಿಸುವ ಬಗ್ಗೆ ಪಡುಪಣಂಬೂರಿನ ಮುಲ್ಕಿ ಅರಮನೆ ಧರ್ಮ ಚಾವಡಿಯಲ್ಲಿ ಸೀಮೆಯ ಅರಸು ಕಂಬಳ ಸಮಿತಿ ಹಾಗೂ ಗ್ರಾಮಸ್ಥರ ಸಭೆ ನಡೆಯಿತು.


ಸಭೆಯಲ್ಲಿ ಡಿ. 24ರಂದು ಸೀಮೆಯ ಅರಸು ಕಂಬಳ ನಡೆಸಲು ನಿರ್ಧರಿಸಲಾಯಿತು. ನವೆಂಬರ್ 19ರಂದು ಕಂಬಳಗದ್ದೆಯಲ್ಲಿ ಕೋಣಗಳನ್ನು ಇಳಿಸುವ ಕಾರ್ಯಕ್ರಮ,ಡಿಸೆಂಬರ್ 17ರಂದು ಕುದಿ ಕಂಬಳ, ನಡೆಸುವುದಾಗಿ ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ ಸುಮಾರು 400 ವರ್ಷ ಇತಿಹಾಸದ ಸೀಮೆಯ ಅರಸು ಕಂಬಳವನ್ನು ಯಶಸ್ವಿಗೊಳಿಸಿ ಎಂದು ಕರೆ ನೀಡಿದರು.


ಸಭೆಯಲ್ಲಿ ಕಂಬಳ ಸಮಿತಿಯ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡ್ ಗುತ್ತು, ವಕೀಲರಾದ ಚಂದ್ರಶೇಖರ್, ಸಮಿತಿಯ ಶ್ಯಾಮ್ ಪ್ರಸಾದ್, ಬಂಕಿ ನಾಯಕರು, ಅನಿಲ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಸತೀಶ್ ಶೆಟ್ಟಿ, ಹೇಮನಾಥ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!