ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯಲ್ಲಿ ಜಿಲ್ಲಾ ಕಂಬಳ ಸಮಾಲೋಚನಾ ಸಭೆ; ಸಾಧಕರಿಗೆ ಸನ್ಮಾನ

ದಕ್ಷಿಣ ಕನ್ನಡ ; ಜಿಲ್ಲಾ ಕಂಬಳ ಸಮಿತಿಯು ಕಂಬಳವನ್ನ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆಯನ್ನ ತೆಗೆದುಕೊಂಡಿದೆ, ಹೊಸ ಅಧ್ಯಕ್ಷರ ಅವಧಿಯಲ್ಲಿ ಕಂಬಳವನ್ನು ಇನ್ನೂ ಹೆಚ್ಚು ಪ್ರೋತ್ಸಾಹಿಸುವ ದೃಷ್ಟಿಯಿಂದ ಜಿಲ್ಲಾ ಕಂಬಳ ಸಮಿತಿಯು ನೂತನ ಹೆಜ್ಜೆಯನ್ನ ಇಟ್ಟಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡಬಿದಿರೆಯ ಕಡಲಕೆರೆ ಬಳಿ ಇರುವ ಸೃಷ್ಠಿ ಗಾರ್ಡನ್‌ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆದಿದೆ.

ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರು, ವ್ಯವಸ್ಥಾಪಕರು ಹಾಗೂ ತೀರ್ಪುಗಾರರನ್ನು ಗೌರವಿಸಲಾಗಿದೆ.

ಕಂಬಳ ಸುಸಜ್ಜಿತವಾಗಿ ನಡೆಯಬೇಕಾದರೆ ಕಂಬಳದ ಕೋಣಗಳ ಯಜಮಾನರುಗಳು, ಕೋಣಗಳನ್ನು ಬಿಡುವವರ ಮತ್ತು ಓಡಿಸುವವರ ಸಹಕಾರವೂ ಮುಖ್ಯವಾಗಿಬೇಕು. ಯಾವುದೇ ಗೊಂದಲಗಳಿಲ್ಲದೆ ಎಲ್ಲರೂ ಒಟ್ಟಾಗಿ ಸೇರಿ ಏಕ ಮನಸ್ಸಿನಿಂದ ಕಂಬಳವನ್ನು ಮುನ್ನಡೆಸಬೇಕಾಗಿದೆ. ವೈಯಕ್ತಿಕವಾಗಿ ಕಂಬಳದ ಬಗ್ಗೆ ಯಾರೂ ಕೂಡಾ ಮಾಧ್ಯಮದ ಮುಂದೆ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಠಿಸಬಾರದು ಎಂದು ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!