ಜನ ಮನದ ನಾಡಿ ಮಿಡಿತ

Advertisement

ಕಲ್ಲಬೆಟ್ಟು ಗಣೇಶೋತ್ಸವದಲ್ಲಿ ಧನಸಂಗ್ರಹ ಮಾಡಿ ಅನಾರೋಗ್ಯ ಪೀಡಿತೆಗೆ ನೆರವು ನೀಡಿದ ವಿದ್ಯಾರ್ಥಿನಿಯರು

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ ಪ್ರತಿಕ್ಷಾ ಎಂಬ ವಿದ್ಯಾರ್ಥಿಯರು ಅನಾರೋಗ್ಯ ಪೀಡಿತೆಯ ಚಿಕಿತ್ಸೆಯ ನೆರವಿಗೆ ಸ್ಪಂದಿಸಿದವರು. ಕಲ್ಲಬೆಟ್ಟುವಿನಲ್ಲಿ ನಡೆದ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಈ ನಾಲ್ವರು ವಿದ್ಯಾರ್ಥಿಗಳು ಭಕ್ತರಲ್ಲಿಗೆ ಧನ ಸಂಗ್ರಹದ ಬಾಕ್ಸ್ ಗಳನ್ನು ಹಿಡಿದುಕೊಂಡು
ಹೋಗಿ ಸುಮಾರು 11,116 ರೂವನ್ನು ಸಂಗ್ರಹಿಸಿದ್ದು, ಇದನ್ನು ಕಲ್ಲಬೆಟ್ಟುವಿನ ಕಮಲಾಕ್ಷಿ ಅವರ ಚಿಕಿತ್ಸೆಗಾಗಿ ನೀಡಿದ್ದಾರೆ.


ಕೂಲಿ ಕಾರ್ಮಿಕೆಯಾಗಿರುವ ಕಮಲಾಕ್ಷಿ ಅವರು ಕಲ್ಲಬೆಟ್ಟು ಮಹಮ್ಮಾಯಿ ದೇವಸ್ಥಾನ ಶುಚಿತ್ವಗೊಳಿಸುವ ಕೆಲಸವನ್ನು ನಿರ್ವಹಿಸುತ್ತಿದ್ದರು. ಆದರೆ ಕೆಲವು ದಿನಗಳ ಹಿಂದೆ ಅವರು ರಕ್ತದೊತ್ತಡದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆಯನ್ನು ಪಡೆದುಕೊಂಡು
ನಂತರ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಅವರ ಪತಿಯೂ ಕೂಲಿಕಾರ್ಮಿಕರಾಗಿದ್ದು, ಬಡಕುಟುಂಬದವರಾಗಿರುವ ಇವರ ಸ್ಥಿತಿಯನ್ನು ಕಂಡ ವಿದ್ಯಾರ್ಥಿನಿಯರು ಧನ ಸಂಗ್ರಹ ಮಾಡಿ ಚಿಕಿತ್ಸೆಯ ನೆರವಿಗೆ ಸ್ಪಂದಿಸುತ್ತ ಈ ಕಾರ್ಯವನ್ನು ಕೈಗೊಂಡಿದ್ದರು. ಅದರಂತೆ ಸಂಗ್ರಹವಾಗಿರುವ ಧನವನ್ನು ಕಮಲಾಕ್ಷಿ ಅವರ ಮನೆಗೆ ತೆರಳಿ ಹಸ್ತಾಂತರಿಸುವ ಮೂಲಕ ಗಮನ ಸೆಳೆದಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!