ಜನ ಮನದ ನಾಡಿ ಮಿಡಿತ

Advertisement

ಪ್ರಿಯತಮೆಯ ಜೊತೆ ಜಗಳ; ಬಿಜೆಪಿ ಶಾಸಕರೊಬ್ಬರ ನಿವಾಸದ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾದ ಯುವಕ..!

ಲಕ್ನೋದಲ್ಲಿ ಬಿಜೆಪಿ ಶಾಸಕರೊಬ್ಬರ ಅಧಿಕೃತ ನಿವಾಸದ ಮೇಲಿನಿಂದ 24 ವರ್ಷದ ಯುವಕ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಲಕ್ನೋದಲ್ಲಿ ಬಿಜೆಪಿ ಶಾಸಕರೊಬ್ಬರ ಅಧಿಕೃತ ನಿವಾಸದ ಮೇಲಿನಿಂದ 24 ವರ್ಷದ ಯುವಕ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕನನ್ನು ಶ್ರೇಷ್ಠಾ ತಿವಾರಿ ಎಂದು ಗುರುತಿಸಲಾಗಿದ್ದು, ಲಕ್ನೋದ ಬಕ್ಷಿ ಕಾ ತಲಾಬ್‌ನ ಬಿಜೆಪಿ ಶಾಸಕ ಯೋಗೇಶ್ ಶುಕ್ಲಾ ಅವರ ಮಾಧ್ಯಮ ಸಲಹೆಗಾರರಾಗಿ ಶ್ರೇಷ್ಠಾ ತಿವಾರಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಶ್ರೇಷ್ಠಾ ತಿವಾರಿ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದು, ಆಕೆಯ ಜತೆಗೆ ಜಗಳವಾಡಿ ಮನನೊಂದು ಆತ್ಮಹತ್ಯೆ ಮಾಡಿದ್ದಾನೆ ಎಂದು ಪೊಲೀಸ್‌ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇನ್ನು ಈ ಯುವಕ ಆತ್ಮಹತ್ಯೆ ಮಾಡಿಕೊಳ್ಳವ ಮುನ್ನ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಯುವತಿಗೆ ವಿಡಿಯೋ ಕಾಲ್​ ಮಾಡಿದ್ದು, ಈ ವೇಳೆ ಯುವತಿಯು ಈ ವಿಡಿಯೋ ಕಾಲ್​​​ನ ಸ್ಕ್ರೀನ್‌ಶಾಟ್‌ಗಳನ್ನು ತೆಗೆದುಕೊಂಡಿದ್ದಾಳೆ. ಇಬ್ಬರು ನಾಲ್ಕು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಯಾವುದೋ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂತರ ವಿಷಯ ತಿಳಿಯುತ್ತಿದ್ದಂತೆ ಯುವತಿ ಶ್ರೇಷ್ಠಾ ತಿವಾರಿ ಆತ್ಮಹತ್ಯೆ ಮಾಡಿಕೊಂಡು ಸ್ಥಳಕ್ಕೆ ಧಾವಿಸಿದ್ದಾಳೆ. ಪೊಲೀಸರ ವರದಿ ಪ್ರಕಾರ ಇಲ್ಲಿಯವರೆಗೆ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು? ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಜತೆಗೆ ಇದಕ್ಕೆ ಯಾವುದೇ ಪುರಾವೆಗಳು ಇಲ್ಲ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಪಾಂಡೆ ತಿಳಿಸಿದ್ದಾರೆ. ಇದೀಗ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ಯುವತಿಯ ಮೊಬೈಲ್‌ನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!