ಜನ ಮನದ ನಾಡಿ ಮಿಡಿತ

Advertisement

ಸೌಂದರ್ಯ ಸ್ಪರ್ಧೆಯಲ್ಲಿ ‘ರನ್ನರ್ ಅಪ್’ ಕಿರೀಟ ಮುಡಿಗೇರಿಸಿಕೊಂಡ ಕರಾವಳಿಯ ಕುವರಿ ಈಶಿಕಾ

ದಕ್ಷಿಣ ಕನ್ನಡ ; ಬೆಂಗಳೂರಿನ ಏನ್. ಬಿ. ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ, ವೈಟ್ ಫೀಲ್ಡ್ ನ ಫ್ಲೋಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ಹೋಟೆಲ್ ನಲ್ಲಿ ಆಯೋಜಿಸಿದ್ದ, ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಈಶಿಕಾ ಮೊದಲ ರನ್ನರ್ ಅಪ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಈಶಿಕಾ ಅವರು ಶ್ವೇತಾ ಹಾಗೂ ಶರತ್ ಶೆಟ್ಟಿ ದಂಪತಿಗಳ ಮಗಳಾಗಿದ್ದು, ಶರತ್ ಶೆಟ್ಟಿ ಅವರು ಮಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಕಳೆದ 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಸಹಾಯಕ ಆರಕ್ಷಕ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ ಇವರ ತಾಯಿ ಶ್ವೇತಾ ಗೃಹಿಣಿಯಾಗಿದ್ದಾರೆ. ಇವರು ತಮ್ಮ ಮಗಳ ಬಗ್ಗೆ ಮಾಧ್ಯಮದವರ ಜೊತೆ ಮಾತಾನಾಡಿ, ಈಶಿಕಾ ಸಾಧನೆಯ ಬಗ್ಗೆ ಸಂತಸವನ್ನು ಹಂಚಿಕೊ0ಡಿದ್ದಾರೆ. ಈಶಿಕ ಇವರ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದು, ತಮ್ಮ ಮಗಳ ಸಾಧನೆಗೆ ಇನ್ನಷ್ಟು ಪ್ರೋತ್ಸಾಹ ನೀಡುವುದಾಗಿ ತಿಳಿಸಿದ್ದಾರೆ.
ಇನ್ನೂ ಈ ಬಗ್ಗೆ ಸ್ವತಃ ಈಶಿಕಾರವರು ಮಾತಾನಾಡಿ, ತಾಯಿ ತಂದೆಯ ನಿರಂತರ ಪ್ರೋತ್ಸಾಹ, ಬಂಧು ಬಾಂಧವರ ಹಾಗೂ ಸಂಬAಧ ಪಟ್ಟ ಅಧ್ಯಾಪಕರುಗಳ ಮಾರ್ಗದರ್ಶನ, ಪ್ರೇರಣೆ ಸಾಧನೆಗೆ ಸಹಕಾರಿಯಾಯಿತು ಎಂದರು.

ಮಂಗಳೂರಿಗೆ ಸೌಂದರ್ಯ ಸ್ಪರ್ಧೆಯಲ್ಲಿ ಈಶಿಕಾರವರು ಕೀರ್ತಿಯನ್ನು ತಂದಿದ್ದಾರೆ. ಮಿಸ್ ಟೀನ್ ಟ್ಯಾಲೆಂಟೆಡ್ ಪ್ರಶಸ್ತಿ ಯನ್ನೂ ತಮ್ಮದಾಗಿಸಿಕೊಂಡು ಸಮಕಾಲೀನ ಯುವತಿರಲ್ಲಿ ತನ್ನನ್ನು ತಾನು ಸಾಧಕರ ಸಾಲಿನಲ್ಲಿ ವಿಶೇಷವಾಗಿ ಗುರುತಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ವ್ಯಾಸಂಗ ನಡೆಸುತ್ತಿರುವ ಈಶಿಕಾ ಇವರು ಇನ್ನಷ್ಟು ಸಾಧನೆ ಮಾಡಲಿ ಎನ್ನುವುದು ನಮ್ಮೆಲ್ಲರ ಆಶಯ.   

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!