ಜನ ಮನದ ನಾಡಿ ಮಿಡಿತ

Advertisement

ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ- ಮಾರುತಿ ಪಿ.

ಮುಲ್ಕಿ: ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ. ಇದು ಮೆದುಳು ಮತ್ತು ನರಮಂಡಲದ ಬೂದು ದ್ರವ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ, ಇದರಿಂದ ಅವರಿಗೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಲು ಕಷ್ಟಕರವಾಗುತ್ತದೆ.

ಮಾದಕ ವ್ಯಸನವು ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು ಎಂದು ಮೂಲ್ಕಿ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಮಾರುತಿ ಪಿ. ಹೇಳಿದರು .ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಮಾದಕ ದ್ರವ್ಯ ಜಾಗೃತಿ ಅಭಿಯಾನದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ. ರಾವ್, ಡ್ರಗ್ ಕೇವಲ ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜದ ಮೇಲೆ ಕೂಡ ಭಾರೀ ಪರಿಣಾಮ ಹೊಂದಿದೆ. ಇದು ಸಾಮಾಜಿಕವಾಗಿ, ದೈಹಿಕವಾಗಿ, ಸಾಂಸ್ಕೃತಿಕವಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಹಾಳುಮಾಡುತ್ತದೆ ಇದರ ಬಗ್ಗೆ ಜಾಗೃತರಾಗಿ ಎಂದು ತಿಳಿಸಿದರು.

ಮೂಲ್ಕಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶ್ರೀದೇವಿ ಚೌಹಾಣ್ ಹಾಗೂ ಸುರೇಂದ್ರನ್ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ದಿವ್ಯಾ ಟಿ. ಶೆಟ್ಟಿ ಸ್ವಾಗತಿಸಿದರು, ಸಹ ಶಿಕ್ಷಕಿ ಹೇಮಲತಾ ವಂದಿಸಿದರು, ದೀಪಿಕ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!