ಜನ ಮನದ ನಾಡಿ ಮಿಡಿತ

Advertisement

ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ- ಮಾರುತಿ ಪಿ.

ಮುಲ್ಕಿ: ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ. ಇದು ಮೆದುಳು ಮತ್ತು ನರಮಂಡಲದ ಬೂದು ದ್ರವ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ, ಇದರಿಂದ ಅವರಿಗೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಲು ಕಷ್ಟಕರವಾಗುತ್ತದೆ.

ಮಾದಕ ವ್ಯಸನವು ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು ಎಂದು ಮೂಲ್ಕಿ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಮಾರುತಿ ಪಿ. ಹೇಳಿದರು .ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಮಾದಕ ದ್ರವ್ಯ ಜಾಗೃತಿ ಅಭಿಯಾನದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ. ರಾವ್, ಡ್ರಗ್ ಕೇವಲ ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜದ ಮೇಲೆ ಕೂಡ ಭಾರೀ ಪರಿಣಾಮ ಹೊಂದಿದೆ. ಇದು ಸಾಮಾಜಿಕವಾಗಿ, ದೈಹಿಕವಾಗಿ, ಸಾಂಸ್ಕೃತಿಕವಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಹಾಳುಮಾಡುತ್ತದೆ ಇದರ ಬಗ್ಗೆ ಜಾಗೃತರಾಗಿ ಎಂದು ತಿಳಿಸಿದರು.

ಮೂಲ್ಕಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶ್ರೀದೇವಿ ಚೌಹಾಣ್ ಹಾಗೂ ಸುರೇಂದ್ರನ್ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ದಿವ್ಯಾ ಟಿ. ಶೆಟ್ಟಿ ಸ್ವಾಗತಿಸಿದರು, ಸಹ ಶಿಕ್ಷಕಿ ಹೇಮಲತಾ ವಂದಿಸಿದರು, ದೀಪಿಕ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!