ಜನ ಮನದ ನಾಡಿ ಮಿಡಿತ

Advertisement

ಎನ್.ಎಸ್.ಎಸ್ ಚಟುವಟಿಕೆಗಳೇ ಭವಿಷ್ಯದ ಸಮಾಜ ಸೇವಾಕಾರ್ಯಗಳಿಗೆ ಬುನಾದಿ – ಪುನರೂರು

ಕಿನ್ನಿಗೋಳಿ : ವಿದ್ಯಾರ್ಥಿ ದೆಸೆಯಲ್ಲಿ ಮನಸ್ಸಿದ್ದೋ ಇಲ್ಲದೆಯೋ ಮಾಡುವ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳು ಮುಂದೆ ನಮ್ಮ ಜೀವನದಲ್ಲಿ ಮಹತ್ವದ ವ್ಯಕ್ತಿತ್ವದ ಬೆಳವಣಿಗೆಗೆ ವಿಶೇಷ ಪಾತ್ರವನ್ನು ವಹಿಸುತ್ತವೆ ಎಂದು ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರುರವರು ವಿದ್ಯಾರ್ಥಿಗಳಿಗೆ ಹೇಳಿದರು.

ಅವರು ಪೊಂಪೈ ಕಾಲೇಜು ಐಕಳದ ‘ಎನ್.ಎಸ್.ಎಸ್ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸೇವಾ ದಿನಾಚರಣೆಯ ಶುಭ ಸಂದರ್ಭದಲ್ಲಿ ಯುವ ಸಮಾಜ ಸೇವಕರಾದ ದೇವಪ್ರಸಾದ್ ಪುನರೂರು ಅವರನ್ನು ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪ್ರಾಂಶುಪಾಲರಾದ ಡಾ. ಪುರುಷೋತ್ತಮ ಕೆ.ವಿ.ಯವರು ಅಧ್ಯಕ್ಷತೆಯನ್ನು ವಹಿಸಿದ್ದು, ದೇವಪ್ರಸಾದರು ಸ್ಥಾಪಕಾಧ್ಯಕ್ಷರಾಗಿರುವ ಪುನರೂರು ಪ್ರತಿಷ್ಠಾನದ ಸೇವಾಕಾರ್ಯಗಳನ್ನು ಶ್ಲಾಘಿಸಿದರು.


ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ನೇಮಿಚಂದ್ರ ಗೌಡ ಎಂ., ಸಹ ಅಧಿಕಾರಿ ಶ್ರೀಮತಿ ಆಶಾಲತಾ ಟಿ.ಜಿ., ಘಟಕದ ವಿದ್ಯಾರ್ಥಿ ನಾಯಕ ಯೋಗಾನಂದರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಘಟಕದ ನೇಹಾ ಸ್ವಾಗತಿಸಿ, ಸನ್ನಿಧಿ ವಂದಿಸಿದರು. ಸಾನಿಯಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!