ಜನ ಮನದ ನಾಡಿ ಮಿಡಿತ

Advertisement

‘ಸ್ವಯಂ ರಕ್ಷಣೆಯೇ ಅತ್ಯುತ್ತಮ ರಕ್ಷಣೆ

ಮೂಡಬಿದಿರೆ: ‘ಸ್ವಯಂ ರಕ್ಷಣೆಯೇ ಅತ್ಯುತ್ತಮ ರಕ್ಷಣೆ’ ಎಂದು ಸ್ವರಕ್ಷಾ ಫಾರ್ ವುಮೆನ್ ಟ್ರಸ್ಟ್ ಸಂಸ್ಥಾಪಕ ಕಾರ್ತಿಕ್ ಎಸ್. ಕಟೀಲ್ ಹೇಳಿದರು.


ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಈಚೆಗೆ ಹಮ್ಮಿಕೊಂಡ ‘ಮಹಿಳೆಯರಿಗೆ ಸ್ವರಕ್ಷಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ದೈಹಿಕ ಮತ್ತು ಮಾನಸಿಕ ದೌರ್ಜನ್ಯಗಳಿದ್ದು, ಶೇಕಡಾ 98.2ರಷ್ಟು ದೌರ್ಜನ್ಯಗಳು ಪರಿಚಿತರಿಂದಲೇ ನಡೆದಿವೆ. ಮೊಬೈಲ್ ಸೇರಿದಂತೆ ಯಾವುದೇ ವೈಯಕ್ತಿಕ ವಸ್ತುಗಳನ್ನು ಇತರರ ಜೊತೆ ಹಂಚಿಕೊಳ್ಳಬಾರದು ಎಂದರು.
‘ಅತಿಯಾದ ನಂಬಿಕೆ, ಅವಲಂಬನೆ, ವ್ಯಾಮೋಹಕ್ಕೆ ಒಳಗಾಗಬಾರದು. ಉಚಿತ ಮತ್ತಿತರ ಆಮಿಷದ ಸೆಳೆತಕ್ಕೂ ಒಳಗಾಗಬೇಡಿ. ವಾಹನಗಳಲ್ಲೂ ಅನಗತ್ಯ ‘ಡ್ರಾಪ್’ ನೀಡುವುದು ಅಥವಾ ಪಡೆಯುವುದು ಬೇಡ’ ಎಂದರು.


‘ಒಳ್ಳೆಯ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಬೇಕು’ ಎಂದು ಪೋಷಕರಿಗೆ ತಿಳಿಸಿದರು.
ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಸಂಯೋಜಕಿ ವಿನೆಟ್ ಚಂದನ ಮಸ್ಕರೇನಸ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ಎನ್., ವಿಜ್ಞಾನ ವಿಭಾಗ-೯ರ ಸಂಯೋಜಕಿ ವಿದ್ಯಾ ಕೆ., ಕಾರ್ತಿಕ್ ಎಸ್. ಕಟೀಲ್ ಅವರ ತಾಯಿ ಶೋಭಲತಾ ಇದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!