ಜನ ಮನದ ನಾಡಿ ಮಿಡಿತ

Advertisement

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಮೈಸೂರು ವಿಭಾಗದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಆಳ್ವಾಸ್ ಕಾಲೇಜ್ ಆಫ್ ಎಲೈಡ್ ಮೆಡಿಕಲ್ ಸೈನ್ಸ್ ವಿಭಾಗದ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆಯುವ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ 2023-24 ಗುರುವಾರ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ರಾಜೀವ್ ಗಾಂಧಿ ಆರೋಗ್ಯ ವಿವಿಯ ಮೈಸೂರು ವಿಭಾಗದ ಸಹ ಸಂಯೋಜಕ ಡಾ.ಸುರೇಶ್ ಎಸ್.ಎಂ. ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿ ಭಾರತ ದೇಶದ ಜನಪ್ರಿಯ ಕ್ರೀಡೆಯಾಗಿರುವ ಕಬಡ್ಡಿಯನ್ನು ಎಲ್ಲರೂ ಪ್ರೀತಿಸುತ್ತಾರೆ. ಗ್ರಾಮಾಂತರ ಪ್ರದೇಶದಲ್ಲಿ ಈ ಕ್ರೀಡೆಯನ್ನು ಅತ್ಯಂತ ಗರಿಷ್ಠ ಪ್ರಮಾಣದಲ್ಲಿ ಆಡುತ್ತಿದ್ದು ಪ್ರೊ.ಕಬಡ್ಡಿಯಿಂದಾಗಿ ಇದೀಗ ಜನಪ್ರಿಯತೆ ದುಪ್ಪಟ್ಟಾಗಿದೆ ಎಂದು ಹೇಳಿದರು.


ಕ್ರೀಡಾಪಟುಗಳು ವಿವಿಗಳ ನೀತಿ ನಿಯಮಗಳಿಗೆ ಗೌರವ ನೀಡಿ. ಕ್ರೀಡೆಯಲ್ಲಿ ಸೋಲು ಗೆಲುವು ಇದ್ದದ್ದೆ ಇದಕ್ಕೆ ಕ್ರೀಡಾಪಟುಗಳು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಇಂದು ಸೋತವರಿಗೆ ಮುಂದೆ ಗೆಲ್ಲುವ ಅವಕಾಶವಿದೆ ಎಂದು ಹೇಳಿದ ಅವರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಕಾಲೇಜುಗಳು ಭಾಗವಹಿಸಿವೆ. ವಿವಿಯ ದೈಹಿಕ ಶಿಕ್ಷಣ ಶಿಕ್ಷಕರುಗಳು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ವಿವಿಯ ಕ್ರೀಡೆಯಲ್ಲಿ ಭಾಗವಹಿಸುವಂತೆ ಮಾಡಿ ಕ್ರೀಡಾಕ್ಷೇತ್ರವನ್ನು ಪ್ರಗತಿಯತ್ತ ಕೊಂಡೋಯ್ಯಬೇಕಾಗಿದೆ ಎಂದು ಸಲಹೆ ನೀಡಿದರು.

ಆಳ್ವಾಸ್ ಕಾಲೇಜ್ ಅಫ್ ಎಲೈಡ್ ಹೆಲ್ತ್ ಸೈನ್ಸ್ ವಿಭಾಗದ ಪ್ರಾಂಶುಪಾಲ ಡಾ.ಶಂಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಧು ಜಿ.ಆರ್. ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ಎಸ್. ಉಪಸ್ಥಿತರಿದ್ದರು.


ಫಾತಿಮಾ ಮುಶ್ಕಾನ್ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ಕಾಲೇಜ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ನ ಉಪ ಪ್ರಾಂಶುಪಾಲೆ ಡಾ.ವನಿತಾ ಧನ್ಯವಾದಗೈದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!