ಜನ ಮನದ ನಾಡಿ ಮಿಡಿತ

Advertisement

ಕುಂಬಳೆ; ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ

ಅಣ್ಣ ತಂಗಿಯರ ಇಬ್ಬರು ಹೆಣ್ಣುಮಕ್ಕಳು ನಾಪತ್ತೆಯಾದ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಕುಂಬಳೆ ಹಾಗೂ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 15ರ ಹರೆಯದ ಹಾಗೂ 22ರ ಹರೆಯದ ಹೆಣ್ಮಕ್ಕಳು ನಿಗೂಢವಾಗಿ ನಾಪತ್ತೆಯಾದವರು.

ವರ್ಕಾಡಿ ನಿವಾಸಿ 15ರ ಹರೆಯದ ಬಾಲಕಿಯ ಹೆತ್ತವರು ಉಳ್ಳಾಲದಲ್ಲಿ ನಡೆದಿದ್ದ ವಿವಾಹಕ್ಕೆ ತೆರಳಿದ್ದರು. ಇಬ್ಬರು ಹೆಣ್ಮಕ್ಕಳ ಸಹಿತ ನಾಲ್ವರು ಮಕ್ಕಳು ಮನೆಯಲ್ಲಿ ಉಳಿದುಕೊಂಡಿದ್ದರು. ಸಂಜೆ ಮನೆಗೆ ವಾಪಸಾದಾಗ ಮಗಳು ನಾಪತ್ತೆಯಾಗಿದ್ದಳು. ಉಳಿದ ಮಕ್ಕಳಲ್ಲಿ ಪ್ರಶ್ನಿಸಿದಾಗ ಬಾಲಕಿ ಮುಟ್ಟಂಗೆ ತೆರಳಿರುವುದಾಗಿ ತಿಳಿಸಿದ್ದಾರೆ.

ಬಾಲಕಿಯ ತಂದೆ ಮುಟ್ಟಂನಲ್ಲಿರುವ ಸಹೋದರಿಯ ಮನೆಗೆ ಕರೆ ಮಾಡಿ ವಿಚಾರಿಸಿದಾಗ ತನ್ನ 22ರ ಹರೆಯದ ಯುವತಿಯೂ ನಾಪತ್ತೆಯಾಗಿದ್ದಾಳೆಂದು ತಿಳಿಸಿ ದ್ದಾರೆ. ಈ ಇಬ್ಬರು ಜತೆಯಾಗಿ ಹೋಗಿರಬಹುದೆಂದು ಶಂಕಿಸಿ ಇತರೆಡೆ ಹುಡುಕಾಡಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮಂಜೇಶ್ವರ ಮತು ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ನಡೆಸಿದ ತನಿಖೆಯಲ್ಲಿ ಇವರಿಬ್ಬರ ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಆಗಿರುವುದು ತಿಳಿದು ಬಂದಿದೆ.

ಇವರ ಪತ್ತೆಗೆ ವಿವಿಧ ಸ್ಥಳಗಳಲ್ಲಿರುವ ಸಿಸಿಟಿವಿ ಕೆಮರಾಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

ಬಳ್ಳಾರಿ: ಹೋಟೆಲ್‌ನಲ್ಲಿ ಏಕಾಏಕಿ ಬ್ಲಾಸ್ಟ್ ಆದ ಸಿಲಿಂಡರ್; ಬಾಲಕನಿಗೆ ಗಂಭೀರ ಗಾಯ..!

ಉಡುಪಿ: ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪ*ತ್ತೆ….!

error: Content is protected !!