ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಗ್ರಾಮೀಣ ಭಾಗದ ಕೃಷಿಕರಿಗೆ ಸವಲತ್ತು ಪಡೆಯಲು ಸಹಕಾರಿ ಸಂಘಗಳು ಅಗತ್ಯ -ದುಗ್ಗಣ್ಣ ಸಾವಂತರು

ಮುಲ್ಕಿ: ಮುಲ್ಕಿ ವಲಯದ ಪಡುಪಣಂಬೂರು ವಿನಯ ತೆಂಗು ಬೆಳೆಗಾರರ ರೈತ ಉತ್ಪಾದಕ ಕಂಪನಿ, ಕರ್ನಾಟಕ ಸರಕಾರ ತೋಟಗಾರಿಕಾ ಇಲಾಖೆಯ ಸಹಯೋಗದಡಿ ಮತ್ತು ಬೆಂಗಳೂರು ಐಸಿಸಿಒಎ ಸಂಪನ್ಮೂಲ ಸಂಸ್ಥೆ ಸಹಭಾಗಿತ್ವದಲ್ಲಿ ವಾರ್ಷಿಕ ಮಹಾಸಭೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿನಯ ಬೆಳೆಗಾರರ ಸಂಘದ ಅಧ್ಯಕ್ಷರಾದ ವಿಜಯ ಶೆಟ್ಟಿ ಕೋಲ್ನಾಡು ವಹಿಸಿದ್ದರು.
ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸರಕಾರದ ಸವಲತ್ತುಗಳನ್ನು ಪ್ರತಿ ಗ್ರಾಮದ ಕೃಷಿಕರು ಪಡೆಯುವಂತಾಗಲು ಸಹಕಾರ ಸಂಘಗಳು ಅಗತ್ಯ ಎಂದರು
ಶಾಸಕ ಉಮಾನಾಥ ಕೋಟ್ಯಾನ್ ದೀಪ ಪ್ರಜ್ವಲನೆ ಮಾಡಿ ಮಾತನಾಡಿ ಯುವ ಜನಾಂಗಕ್ಕೆ ಕೃಷಿಗೆ ಪ್ರೋತ್ಸಾಹ ನೀಡುತ್ತಿರುವ ವಿನಯ ಬೆಳಗಾರರ ಸಂಘ ಗ್ರಾಮಕ್ಕೆ ಮಾದರಿ ಎಂದರು.


ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ ಲೋಗೋ ಬಿಡುಗಡೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ, ಮುಲ್ಕಿ ಹೋಬಳಿಯ ಕೃಷಿ ಅಧಿಕಾರಿ ವಸಂತ್ ಶ್ರೀನಿವಾಸ್ ಕುಲಕರ್ಣಿ, ಸಹಾಯಕ ತೋಟಗಾರಿಕಾ ಅಧಿಕಾರಿ ಯುಗೇಂದ್ರ, ಬೆಂಗಳೂರು ಐಸಿಸಿಒಎ ಹಿರಿಯ ಮುಖ್ಯಸ್ಥ ಭಾನುಪ್ರಕಾಶ್, ಜಿಲ್ಲಾ ಸಂಯೋಜಕ ಸತೀಶ್ ನಾಯ್ಕ, ವಿಜಯ ಶೆಟ್ಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾ ಸದಾಶಿವ ಶೆಟ್ಟಿ, ಪುರುಷೋತ್ತಮ ಕೆ. ಕೋಟ್ಯಾನ್, ಗಂಗಾಧರ ಶೆಟ್ಟಿ ಬರ್ಕೆ ತೋಟ ಮತ್ತಿತರರು ಉಪಸ್ಥಿತರಿದ್ದರು. ಪತ್ರಕರ್ತ ನವೀನ್ ಶೆಟ್ಟಿಎಡ್ಮೆಮಾರ್ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!