ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಗ್ರಾಮೀಣ ಭಾಗದ ಕೃಷಿಕರಿಗೆ ಸವಲತ್ತು ಪಡೆಯಲು ಸಹಕಾರಿ ಸಂಘಗಳು ಅಗತ್ಯ -ದುಗ್ಗಣ್ಣ ಸಾವಂತರು

ಮುಲ್ಕಿ: ಮುಲ್ಕಿ ವಲಯದ ಪಡುಪಣಂಬೂರು ವಿನಯ ತೆಂಗು ಬೆಳೆಗಾರರ ರೈತ ಉತ್ಪಾದಕ ಕಂಪನಿ, ಕರ್ನಾಟಕ ಸರಕಾರ ತೋಟಗಾರಿಕಾ ಇಲಾಖೆಯ ಸಹಯೋಗದಡಿ ಮತ್ತು ಬೆಂಗಳೂರು ಐಸಿಸಿಒಎ ಸಂಪನ್ಮೂಲ ಸಂಸ್ಥೆ ಸಹಭಾಗಿತ್ವದಲ್ಲಿ ವಾರ್ಷಿಕ ಮಹಾಸಭೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿನಯ ಬೆಳೆಗಾರರ ಸಂಘದ ಅಧ್ಯಕ್ಷರಾದ ವಿಜಯ ಶೆಟ್ಟಿ ಕೋಲ್ನಾಡು ವಹಿಸಿದ್ದರು.
ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸರಕಾರದ ಸವಲತ್ತುಗಳನ್ನು ಪ್ರತಿ ಗ್ರಾಮದ ಕೃಷಿಕರು ಪಡೆಯುವಂತಾಗಲು ಸಹಕಾರ ಸಂಘಗಳು ಅಗತ್ಯ ಎಂದರು
ಶಾಸಕ ಉಮಾನಾಥ ಕೋಟ್ಯಾನ್ ದೀಪ ಪ್ರಜ್ವಲನೆ ಮಾಡಿ ಮಾತನಾಡಿ ಯುವ ಜನಾಂಗಕ್ಕೆ ಕೃಷಿಗೆ ಪ್ರೋತ್ಸಾಹ ನೀಡುತ್ತಿರುವ ವಿನಯ ಬೆಳಗಾರರ ಸಂಘ ಗ್ರಾಮಕ್ಕೆ ಮಾದರಿ ಎಂದರು.


ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ ಲೋಗೋ ಬಿಡುಗಡೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ, ಮುಲ್ಕಿ ಹೋಬಳಿಯ ಕೃಷಿ ಅಧಿಕಾರಿ ವಸಂತ್ ಶ್ರೀನಿವಾಸ್ ಕುಲಕರ್ಣಿ, ಸಹಾಯಕ ತೋಟಗಾರಿಕಾ ಅಧಿಕಾರಿ ಯುಗೇಂದ್ರ, ಬೆಂಗಳೂರು ಐಸಿಸಿಒಎ ಹಿರಿಯ ಮುಖ್ಯಸ್ಥ ಭಾನುಪ್ರಕಾಶ್, ಜಿಲ್ಲಾ ಸಂಯೋಜಕ ಸತೀಶ್ ನಾಯ್ಕ, ವಿಜಯ ಶೆಟ್ಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾ ಸದಾಶಿವ ಶೆಟ್ಟಿ, ಪುರುಷೋತ್ತಮ ಕೆ. ಕೋಟ್ಯಾನ್, ಗಂಗಾಧರ ಶೆಟ್ಟಿ ಬರ್ಕೆ ತೋಟ ಮತ್ತಿತರರು ಉಪಸ್ಥಿತರಿದ್ದರು. ಪತ್ರಕರ್ತ ನವೀನ್ ಶೆಟ್ಟಿಎಡ್ಮೆಮಾರ್ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!