ಜನ ಮನದ ನಾಡಿ ಮಿಡಿತ

Advertisement

“ನನ್ನ ಗಿಡ ನನ್ನ ಮರ ನನ್ನ ನೆಲ ನನ್ನ ಜಲ ಸಪ್ತಾಹ” ಕಾರ್ಯಕ್ರಮ

ಗ್ರಾಮ ಪಂಚಾಯತ್ ಹೊಸಂಗಡಿ ಮತ್ತು ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ಮತ್ತು ಹಳೆ ವಿದ್ಯಾರ್ಥಿ ಸಂಘ ಮತ್ತು ಎಸ್.ಡಿ.ಎಂ.ಸಿ ಹಿ.ಪಾ. ಶಾಲೆ ಪಡ್ಡಂದಡ್ಕ ಹಾಗೂ ಅಂಗನವಾಡಿ ಕೇಂದ್ರ ಪಡ್ಡಂದಡ್ಕ ಸಹಭಾಗಿತ್ವದೊಂದಿಗೆ ನೆಲ ಜಲ ಸಂರಕ್ಷಣೆಗಾಗಿ ಹಮ್ಮಿಕೊಂಡಿರುವ ನನ್ನ ಗಿಡ ನನ್ನ ಮರ ನನ್ನ ನೆಲ ನನ್ನ ಜಲ ಸಪ್ತಾಹ ಕಾರ್ಯಕ್ರಮದ ಐದನೇ ದಿನ ಶನಿವಾರ ಪೂರ್ವಾಹ್ನ 9.30 ಘಂಟೆಗೆ ಸರಿಯಾಗಿ ಹಿರಿಯ ಪ್ರಾಥಮಿಕ ಶಾಲೆ ಪಡ್ಡಂದಡ್ಕ ಶಾಲಾ ವಠಾರದಲ್ಲಿ ಪರಿಸರ ಮತ್ತು ಜಲ ಸಂರಕ್ಷಣೆ ಅರಿವು ಕಾರ್ಯಕ್ರಮ ಮತ್ತು ಅಮೃತ ವನದ ಪುನಶ್ಚೇತನ ಮತ್ತು ಪಡ್ಡoದಡ್ಕ ಅಂಗನವಾಡಿಯ ಪೌಷ್ಠಿಕ ತೋಟದ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ವಹಿಸಿದ್ದರು. ಪಂಚಾಯತ್ ಸದಸ್ಯರಾದ ಹರಿಪ್ರಸಾದ್ ಠಿ, ನಾಗರತ್ನ, ಪ್ರಕಾಶ್ ದೇವಾಡಿಗ, ರೋಟರಿ ತರಬೇತುದಾರ ಖಣಟಿ ರಾಜೇಶ್ ನೆಲ್ಯಾಡಿ, ಪಿಡಿಒ ಗಣೇಶ್ ಶೆಟ್ಟಿ, ಅಧ್ಯಕ್ಷರಾದ ಶಬೀರ್, ಹಳೇ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ರಮೇಶ್ ಹೆಗ್ಡೆ, ಗುತ್ತಿಗೆದಾರರಾದ ಮಹಮ್ಮದ್ , ಶಾಲಾ ಶಿಕ್ಷಕರು, ಅಂಗನವಾಡಿ ಶಿಕ್ಷಕಿ ಸುಶೀಲ, ಸಹಾಯಕಿ, ಪೋಷಕರು, ವಿಧ್ಯಾರ್ಥಿಗಳು ಹಾಗೂ ಆಳ್ವಾಸ್ ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಪಡ್ಡಂದಡ್ಕ ಶಾಲಾ ವಠಾರದಲ್ಲಿ ರಚಿಸಲಾದ 75 ವಿವಿಧ ಜಾತಿಯ ಗಿಡಗಳನ್ನು ಒಳಗೊಂಡ ಅಮೃತ ವನಕ್ಕೆ ಜೈವಿಕ ಗೊಬ್ಬರ ಮತ್ತು ಕಳೆ ಕೀಳುವ ಮೂಲಕ ಪುನಶ್ಚೇತನಗೊಳಿಸಲಾಯಿತು.

ನನ್ನ ಗಿಡ ನನ್ನ ಮರ ಯೋಜನೆ ಬಗ್ಗೆ ಪಿಡಿಒ ಮತ್ತು ಹರಿಪ್ರಸಾದ್ ಮಾಹಿತಿ ನೀಡಿದರು. ಅಂಗನವಾಡಿಯಲ್ಲಿ ಪೋಷಕರಿಗೆ ನೆಲ ಜಲ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!