ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ವಿಜೃಂಭಣೆಯ ಗೋ ರಥ ಯಾತ್ರೆ; ಗೋಪೂಜೆ

ಮುಲ್ಕಿ: ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳ ಮತ್ತು ಗೋಸೇವಾ ಗತಿ ವಿಧಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಗೋ ನವರಾತ್ರಿ ಉತ್ಸವದ ಸಂದೇಶ ಮತ್ತು ಉದ್ದೇಶವನ್ನು ಸಾರುವ ಗೋ ರಥಯಾತ್ರೆ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಆಗಮಿಸಿತು.


ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಸಹಿತ ಭಕ್ತಾದಿಗಳು ಸ್ವಾಗತಿಸಿದರು.
ಬಳಿಕ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ಗೋಪೂಜೆ ನಡೆಯಿತು.
ಈ ಸಂದರ್ಭ ಸುನಿಲ್ ಆಳ್ವ, ಮಹೀಮ್ ಹೆಗ್ಡೆ, ವೈ ಎನ್ ಸಾಲ್ಯಾನ್, ಗಂಗಾಧರ ಶೆಟ್ಟಿ ಬರ್ಕೆ ತೋಟ ಮತ್ತಿತರರು ಉಪಸ್ಥಿತರಿದ್ದರು.
ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳ ಮತ್ತು ಗೋಸೇವಾ ಗತಿ ವಿಧಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಗೋ ನವರಾತ್ರಿ ಉತ್ಸವದ ಸಂದೇಶ ಮತ್ತು ಉದ್ದೇಶವನ್ನು ಸಾರುವ ಗೋ ರಥಯಾತ್ರೆ ಮುಲ್ಕಿ ಸೀಮೆ ಅರಮನೆ ಪ್ರವೇಶಿಸಿತು.


ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಗೋವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಪಡುಪಣಂಬೂರು ಗ್ರಾಪಂ ಮಾಜೀ ಅಧ್ಯಕ್ಷ ವಿನೋದ್ ಸಾಲ್ಯಾನ್,ಪಿಸಿಎ ಬ್ಯಾಂಕ್ ನಿರ್ದೇಶಕ ಶ್ಯಾಮ್ ಪ್ರಸಾದ್ , ಗೌತಮ್ ಜೈನ್ ಮುಲ್ಕಿ ಅರಮನೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಗೋಯಾತ್ರೆ ಯು ಚಿತ್ರಾಪು ಮೂಲಕ ಮುಲ್ಕಿಗೆ ಸಂಚರಿಸಿತು.



Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!