ಜನ ಮನದ ನಾಡಿ ಮಿಡಿತ

Advertisement

ಕಾರ್ಮಿಕನ ವಿವಾಹ ನೋಂದಾವಣೆ ವಿಚಾರ: ಅಧಿಕಾರಿಗಳ ಉತ್ತರದಿಂದ ಗೊಂದಲ ಸೃಷ್ಟಿ….?!

ಬಂಟ್ವಾಳ: ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಲ್ಪಟ್ಟ ಕಾರ್ಮಿಕನ ವಿವಾಹಕ್ಕೆ ಸರಕಾರದಿಂದ ಸಿಗುವ ಸಹಾಯಧನ ಪಡೆಯುವ ವಿಚಾರದಲ್ಲಿ ಕಾರ್ಮಿಕ ಇಲಾಖೆಯ ದ.ಕ.ಉಪವಿಭಾಗ-2 ರ ಕಾರ್ಮಿಕ ಅಧಿಕಾರಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರು ಕೇಳಲಾದ ಪ್ರಶ್ನೆಗೆ ನೀಡಿರುವ ವಿಭಿನ್ನ‌ ಉತ್ತರದಿಂದ ಕಾರ್ಮಿಕರು ಗೊಂದಲಕ್ಕೊಳಗಾಗಿದ್ದಾರೆ.

ವಿಶೇಷ ವಿವಾಹ ಅಧಿನಿಯಮ 1854 ಕಲಂ13 ರನ್ವಯ ವಿವಾಹ ನೋಂದಣಾಧಿಕಾರಿಯವರು ನೀಡಿರುವ ಮದುವೆ ಪ್ರಮಾಣಪತ್ರ ಮದುವೆ ಸಹಾಯಧನ ಪಡೆಯಲು ಸಲ್ಲಿಸಬಹುದೆ? ಎಂದು ಮಾಹಿತಿ ಹಕ್ಕು‌ಕಾಯ್ದೆಯಡಿ ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮದುವೆಯ ವಯಸ್ಸು ಹೆಣ್ಣಿಗೂ, ಗಂಡಿಗೂ 21ವರ್ಷ ಎಂಬರ್ಥದ ಉತ್ತರ ನೀಡಿದ್ದರು. 21 ವರ್ಷ ಆಗದೇ ಇದ್ದಲ್ಲಿ ಕಾಯ್ದೆಯಲ್ಲಿ ಮದುವೆಗೆ ಅವಕಾಶವೆ ಇಲ್ಲ ಎಂಬಂತೆ ಉತ್ತರ ನೀಡಲಾಗಿದ್ದು,‌ಈ ಉತ್ತರವು ಹಲವಾರು ಗೊಂದಲಗಳಿಗೆ ಕಾರಣವಾಗಿತ್ತು. ಇದಾದ ನಂತರ ಮತ್ತೋರ್ವ ಅರ್ಜಿದಾರರೋರ್ವರು ಇದೇ ಮಾದರಿಯ ಪ್ರಶ್ನೆಯನ್ನು ಅದೇ ಅಧಿಕಾರಿಗೆ ಮಾಹಿತಿಹಕ್ಕಿನಲ್ಲಿ ಕೇಳಿದ್ದರು.ಎರಡನೇ ಫಲಾನುಭವಿ ಸಲ್ಲಿಸಿದ ಅರ್ಜಿಗೆ ‘ಈ ಕಚೇರಿಯಲ್ಲಿ ಈ ಬಗ್ಗೆ ಯಾವುದೇ ದಾಖಲೆಗಳು ಇರುವುದಿಲ್ಲ’ ಎಂದು ಉತ್ತರಿಸಿದ್ದಾರೆ.

ಕಾರ್ಮಿಕ ಅಧಿಕಾರಿಯವರ ಈ ವಿಭಿನ್ನ ಉತ್ತರದಿಂದ ನೋಂದಾಯಿತು ಕಾರ್ಮಿಕರು ಸರಕಾರದ ಸವಲತ್ತು ಪಡೆಯುವಲ್ಲಿ ಗೊಂದಲಕ್ಕೊಳಗಾಗಿದ್ದಾರೆ.ಸರಕಾರವೇನೋ ದುಡಿಯುವ ಕಾರ್ಮಿಕ ವರ್ಗಕ್ಕೆ ಸವಲತ್ತುಗಳನ್ನು‌ ನೀಡುತ್ತದೆ.ಆದರೆ ಅಧಿಕಾರಿಗಳು ಹಾಕುವಂತ ಕೊಕ್ಕೆಯಿಂದಾಗಿ ಸವಲತ್ತು ಫಲಾನುಭವಿಗಳಿಗೆ ತಲುಪುವಲ್ಲಿ‌ ಸಾಧ್ಯವಾಗುತ್ತಿಲ್ಲ !

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!