ಜನ ಮನದ ನಾಡಿ ಮಿಡಿತ

Advertisement

ಆಳ್ವಾಸ್ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ 250 ಮಂದಿ ಆಕಾಂಕ್ಷಿಗಳು

ಪುತ್ತೂರು; ಮೂಡಬಿದ್ರೆಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು ೩೫೦ಮಂದಿ ಉದ್ಯೋಗ ಆಕಾಂಕ್ಷಿಗಳು ಪುತ್ತೂರಿನಿಂದ ತೆರಳಿದ್ದಾರೆ.

ಉದ್ಯೋಗ ಮೇಳಕ್ಕೆ ತೆರಳುವ ಆಕಾಂಕ್ಷಿಗಳಿಗೆ ಶಾಸಕರ ಟ್ರಸ್ಟ್ ಮೂಲಕ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಕರ‍್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಶಾಂತಿನಗರ, ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಆಳ್ವಾಸ್‌ಗೆ ತೆರಳುವ ಮಂದಿಗೆ ಬಸ್‌ನ ವ್ಯವಸ್ಥೆ ಹಾಗೂ ಇತರೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಟ್ರಸ್ಟ್ ಮೂಲಕ ಮೆಸ್ಕಾಂನಲ್ಲಿ ವಿದ್ಯುತ್ ಕಂಬ ಹತ್ತುವ ತರಬೇತಿ ಮತ್ತು ಪೊಲೀಸ್ ತರಬೇತಿಯನ್ನು ಆಯೋಜಿಸಲಾಗುವುದು. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಸೂಕ್ತ ಜೀವನ ಭದ್ರತೆಯನ್ನು ನೀಡುವಲ್ಲಿ ಟ್ರಸ್ಟ್ ನಿರಂತರವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.

ಉದ್ಯೋಗ ಮೇಳದ ಆಯೋಜಕರಾದ ನಿಹಾಲ್ ಶೆಟ್ಟಿ ಮಾತನಾಡಿ ವಿವಿಧ ಕಂಪೆನಿಗಳಲ್ಲಿ ಉದ್ಯೋಗಕ್ಕಾಗಿ ಸಂರ‍್ಶನಕ್ಕೆ ತೆರಳುವ ಆಕಾಂಕ್ಷಿಗಳು ಯಾವ ರೀತಿ ಸಂರ‍್ಶನವನ್ನು ಎದುರಿಸಬೇಕು ಎಂಬುದರ ಬಗ್ಗೆ ವಿವರಿಸಿದರು. ಉದ್ಯೋಗ ಯಾವುದೇ ಕಂಪೆನಿಯಲ್ಲಿ ದೊರೆತರೂ ನಾವು ಅಲ್ಲಿ ಕೆಲಸ ಮಾಡುವ ಆಸಕ್ತಿಯನ್ನು ಹೊಂದಿರಬೇಕು, ಉದ್ಯೋಗದಿಂದ ಯಾರೂ ವಂಚಿತರಾಗಬಾರದು. ವಿದ್ಯಾವಂತ ನಿರುದ್ಯೋಗಿಗಳು ಸದಾ ಉದ್ಯೋಗ ಹುಡುಕುವಲ್ಲಿ ಮುತುರ‍್ಜಿವಹಿಸಬೇಕು ಎಂದು ಹೇಳಿದರು.

ಕರ‍್ಯಕ್ರಮದಲ್ಲಿ ಶಾಸಕರ ಕಚೇರಿ ಸಿಂಬದಿಗಳಾದ ಪ್ರದೀಪ್, ಜುನೈದ್ ಬಡಗನ್ನೂರು, ಯೋಗೀಶ್ ಸಾಮಾನಿ, ಅಕ್ರಮಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ರಿತೇಶ್ ಶೆಟ್ಟಿ ಮಂಗಳೂರು, ನಗರ ಸಭಾ ಸದಸ್ಯ ರಿಯಾಝ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!