ಜನ ಮನದ ನಾಡಿ ಮಿಡಿತ

Advertisement

ಅಂಚಿಕಟ್ಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಅಕ್ಕಿ ಸಾಗಾಟದ ಲಾರಿ..!

ಬಂಟ್ವಾಳ: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ.


ಘಟನೆಯಲ್ಲಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ.


ಮಂಗಳೂರಿನಿಂದ ಬೆಳ್ತಂಗಡಿಗೆ ಅಕ್ಕಿ ಸಾಗಾಟದ ಲಾರಿಯಾಗಿದ್ದು, ಬಡಗುಂಡಿ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆ ನಡೆದ ಕೂಡಲೇ ಚಾಲಕನನ್ನು ಲಾರಿಯ ಗಾಜು ಪುಡಿ ಮಾಡಿ ಹೊರಕ್ಕೆ ತರಲಾಗಿದೆ.


ಲಾರಿ ಪಲ್ಟಿಯಾಗುವ ವೇಳೆ ರಸ್ತೆ ಬದಿಯ ವಿದ್ಯುತ್ ‌ಕಂಬಕ್ಕೆ ಡಿಕ್ಕಿಯಾಗಿ, ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಅಲ್ಲೇ ಸಮೀಪದಲ್ಲಿ ಹೈ ಟೆನ್ಸನ್ ವಿದ್ಯುತ್ ವಯರ್ ಗಳಿದ್ದು,ಸ್ವಲ್ಪದರಲ್ಲೇ ದೊಡ್ಡ ಅನಾಹುತ ತಪ್ಪಿದೆ. ಘಟನೆಯ ವೇಳೆ ವಿದ್ಯುತ್ ತಂತಿಗೆ ತಾಗಿದ್ದರೆ,ಅನೇಕ ಜೀವಹಾನಿಯಾಗುವ ಬೀಕರ ದುರಂತಕ್ಕೆ ಕಾರಣವಾಗುತ್ತಿತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.


ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!