ಮುಲ್ಕಿ: ಪುನರೂರು ಸಮೀಪದ ಎಸ್.ಕೋಡಿ ಗುಡ್ಡೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾನೆ.
ಮೃತ ವ್ಯಕ್ತಿಯನ್ನು ಮಂಗಳೂರು ಕುಂಪಲ ನಿವಾಸಿ ರಾಮ ಪೂಜಾರಿ (50) ಗುರುತಿಸಲಾಗಿದೆ.

ಮೃತ ರಾಮ ಪೂಜಾರಿ ತಮ್ಮ ಸಂಬಂಧಿಕರ ಮನೆಯಾದ ಕಿನ್ನಿಗೋಳಿ ಸಮೀಪದ ಎಸ್. ಕೋಡಿಗೆ ಬಂದಿದ್ದು ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.
ಮೃತರು ಮಾನಸಿಕವಾಗಿ ನೊಂದಿದ್ದು ಭಾನುವಾರ ಮಧ್ಯಾಹ್ನ ತಮ್ಮ ಸಂಬಂಧಿಕರ ಮನೆಯ ಸಮೀಪದ ಗುಡ್ಡೆಯಲ್ಲಿ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ನಾಪತ್ತೆಯಾಗಿರುವುದನ್ನು ಕಂಡು ಮನೆಯವರು ಹುಡುಕಾಟ ನಡೆಸಿದಾಗ ಮೂರು ಗಂಟೆ ಸುಮಾರಿಗೆ ಗುಡ್ಡೆಯಲ್ಲಿ ನೇಣು ಬಿಗಿದ ರೀತಿಯಲ್ಲಿ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.



