ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮoಗಳೂರು ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ವಿಶ್ವ ಬಂಟರ ಸಮ್ಮೇಳನ -2023 ರ ಪ್ರಯುಕ್ತ ಅ. 28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅ. 29 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಕರಪತ್ರವನ್ನು ದುಬೈಯಲ್ಲಿ ನಡೆದ ಯು. ಎ. ಇ. ಬಂಟರ ಸಂಘದ ಸಮಾರಂಭದಲ್ಲಿ ಸರ್ವೋತಮ್ ಶೆಟ್ಟಿ ಅಧ್ಯಕ್ಷರು ಯು. ಎ. ಇ. ಬಂಟರ ಸಂಘ ಹಾಗೂ ಒಕ್ಕೂಟದ ನಿರ್ದೇಶಕರಾದ ಪ್ರವೀಣ್ ಶೆಟ್ಟಿ ವಕ್ವಾಡಿಯವರು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ, ಮಹಾ ಪೋಷಕರಾದ ಬಿ. ವಿವೇಕ್ ಶೆಟ್ಟಿ ಮುಂಬೈ, ಪೋಷಕರಾದ ರವೀಂದ್ರನಾಥ್ ಭಂಡಾರಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಅರುಣೋದಯ ಎಸ್. ರೈ, ಸಾಂಸ್ಕೃತಿಕ ಸಮಿತಿಯ ಸಹಸಂಚಾಲಕರಾದ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮುಂಬೈ, ನವೀನ್ ಶೆಟ್ಟಿ ಇನ್ನಾ ಬಾಳಿಕೆ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.



