ಜನ ಮನದ ನಾಡಿ ಮಿಡಿತ

Advertisement

ಮಕ್ಕಳಿಂದ ತುಳು ದೇವಿ ಮಹಾತ್ಮೆಗೆ ಸಿದ್ಧತೆ, ಪೋಷಕರಿಗೆ ಇದರಲ್ಲಿದೆ ಬದ್ಧತೆ, ದಾಖಲಾಗಲಿದೆ ಸಾಧನೆಯ ಏಕತೆ…

ದಕ್ಷಿಣ ಕನ್ನಡ: ತುಳುವೆರೆ ಆಯನೊ  ಕೂಟ, ತುಳು ವರ್ಲ್ಡ್, ಮಂದಾರ ಪ್ರತಿಷ್ಠಾನ ಸಹಯೋಗದೊಂದಿಗೆ  ಯಕ್ಷಾರಾಧನಾ ಬಳಗ ಮಕ್ಕಳಿಂದ ಪ್ರಪ್ರಥಮ ಬಾರಿಗೆ ತುಳು ಸಂಪೂರ್ಣ ದೇವಿ ಮಹಾತ್ಮೆ  “ಸಿರಿ ದೇವಿ ಮೈಮೆ” ಯಕ್ಷಗಾನ ಬಯಲಾಟ ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಯಕ್ಷಾರಾಧನಾ ಬಳಗದ ಮುಖ್ಯಸ್ಥೆ ಪದ್ಮಶ್ರೀ ಭಟ್ ಹಾಗೂ ತುಳು ವರ್ಲ್ಡ್ ಮುಖ್ಯಸ್ಥ ರಾಜೇಶ್ ಆಳ್ವ ಬದಿಯಡ್ಕ ನೇತೃತ್ವದಲ್ಲಿ ನಡೆಯಿತು. 

ಸಂಪೂರ್ಣ ದೇವಿ ಮಹಾತ್ಮೆ ತುಳು ಯಕ್ಷಗಾನಕ್ಕಾಗಿ  ಸುಮಾರು 40 ಮಂದಿ ಮಕ್ಕಳನ್ನು ಈಗಾಗಲೇ ಆಯ್ಕೆ ಮಾಡಿದ್ದು, ತರಬೇತಿ ನೀಡಲು ಸಿದ್ಧತೆ ನಡೆದಿದೆ, ಯಕ್ಷಗಾನ ತರಬೇತುದಾರರಾದ ಶ್ರೀಕಾಂತ ರಾವ್ ಹಾಗೂ ಸ್ನೇಹಲತಾ ಇವರು, ಮಕ್ಕಳ ತರಬೇತಿಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದು, ಕಾರ್ಯಕ್ರಮ ಸಂಪೂರ್ಣ ಯಶಸ್ಸಿಗೂ ಆಗುವ ನಿರೀಕ್ಷೆ ಇದೆ.   

ಯಕ್ಷಗಾನ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಪತ್ರಕರ್ತ ಡಾಕ್ಟರ್ ಮಂದಾರ ರಾಜೇಶ್ ಭಟ್, ಲೋಕೇಶ್ ಏ.ಕೆ. ವಿಟ್ಲ, ಶ್ರೀಕಾಂತ ಭಟ್, ಸ್ನೇಹಲತಾ, ಸುಬ್ರಮಣ್ಯ ಭಟ್, ಸೇರಿದಂತೆ ಹಲವರು ಉಪಸ್ಥಿತರಿದ್ದರು. 

 ಇತ್ತೀಚೆಗಷ್ಟೇ ತುಳುವೆರೆ  ಆಯನೊ  ಕೂಟ ವತಿಯಿಂದ  ಸಂಪೂರ್ಣ ತುಳು  ದೇವಿ ಮಹಾತ್ಮೆ ಪ್ರಪ್ರಥಮವಾಗಿ ಮಂಗಳೂರು ಪುರಭವನದಲ್ಲಿ  ಯಶಸ್ವಿ ಪ್ರದರ್ಶನ ಕಂಡಿದ್ದು, ಈಗ ಮಕ್ಕಳಲ್ಲಿ ತುಳು ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿರುವುದು ಯಕ್ಷಗಾನ ಆಸಕ್ತರಿಗೆ  ಹರುಷ ತಂದಿದೆ. ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕದಾಧ್ಯಂತ ಯಕ್ಷಗಾನ ವಿಜೃಂಭಿಸಲಿ ಎಂಬುದು ಎಲ್ಲರ ಆಶಯ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!