ಜನ ಮನದ ನಾಡಿ ಮಿಡಿತ

Advertisement

ಮಕ್ಕಳಿಂದ ತುಳು ದೇವಿ ಮಹಾತ್ಮೆಗೆ ಸಿದ್ಧತೆ, ಪೋಷಕರಿಗೆ ಇದರಲ್ಲಿದೆ ಬದ್ಧತೆ, ದಾಖಲಾಗಲಿದೆ ಸಾಧನೆಯ ಏಕತೆ…

ದಕ್ಷಿಣ ಕನ್ನಡ: ತುಳುವೆರೆ ಆಯನೊ  ಕೂಟ, ತುಳು ವರ್ಲ್ಡ್, ಮಂದಾರ ಪ್ರತಿಷ್ಠಾನ ಸಹಯೋಗದೊಂದಿಗೆ  ಯಕ್ಷಾರಾಧನಾ ಬಳಗ ಮಕ್ಕಳಿಂದ ಪ್ರಪ್ರಥಮ ಬಾರಿಗೆ ತುಳು ಸಂಪೂರ್ಣ ದೇವಿ ಮಹಾತ್ಮೆ  “ಸಿರಿ ದೇವಿ ಮೈಮೆ” ಯಕ್ಷಗಾನ ಬಯಲಾಟ ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಯಕ್ಷಾರಾಧನಾ ಬಳಗದ ಮುಖ್ಯಸ್ಥೆ ಪದ್ಮಶ್ರೀ ಭಟ್ ಹಾಗೂ ತುಳು ವರ್ಲ್ಡ್ ಮುಖ್ಯಸ್ಥ ರಾಜೇಶ್ ಆಳ್ವ ಬದಿಯಡ್ಕ ನೇತೃತ್ವದಲ್ಲಿ ನಡೆಯಿತು. 

ಸಂಪೂರ್ಣ ದೇವಿ ಮಹಾತ್ಮೆ ತುಳು ಯಕ್ಷಗಾನಕ್ಕಾಗಿ  ಸುಮಾರು 40 ಮಂದಿ ಮಕ್ಕಳನ್ನು ಈಗಾಗಲೇ ಆಯ್ಕೆ ಮಾಡಿದ್ದು, ತರಬೇತಿ ನೀಡಲು ಸಿದ್ಧತೆ ನಡೆದಿದೆ, ಯಕ್ಷಗಾನ ತರಬೇತುದಾರರಾದ ಶ್ರೀಕಾಂತ ರಾವ್ ಹಾಗೂ ಸ್ನೇಹಲತಾ ಇವರು, ಮಕ್ಕಳ ತರಬೇತಿಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದು, ಕಾರ್ಯಕ್ರಮ ಸಂಪೂರ್ಣ ಯಶಸ್ಸಿಗೂ ಆಗುವ ನಿರೀಕ್ಷೆ ಇದೆ.   

ಯಕ್ಷಗಾನ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಪತ್ರಕರ್ತ ಡಾಕ್ಟರ್ ಮಂದಾರ ರಾಜೇಶ್ ಭಟ್, ಲೋಕೇಶ್ ಏ.ಕೆ. ವಿಟ್ಲ, ಶ್ರೀಕಾಂತ ಭಟ್, ಸ್ನೇಹಲತಾ, ಸುಬ್ರಮಣ್ಯ ಭಟ್, ಸೇರಿದಂತೆ ಹಲವರು ಉಪಸ್ಥಿತರಿದ್ದರು. 

 ಇತ್ತೀಚೆಗಷ್ಟೇ ತುಳುವೆರೆ  ಆಯನೊ  ಕೂಟ ವತಿಯಿಂದ  ಸಂಪೂರ್ಣ ತುಳು  ದೇವಿ ಮಹಾತ್ಮೆ ಪ್ರಪ್ರಥಮವಾಗಿ ಮಂಗಳೂರು ಪುರಭವನದಲ್ಲಿ  ಯಶಸ್ವಿ ಪ್ರದರ್ಶನ ಕಂಡಿದ್ದು, ಈಗ ಮಕ್ಕಳಲ್ಲಿ ತುಳು ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿರುವುದು ಯಕ್ಷಗಾನ ಆಸಕ್ತರಿಗೆ  ಹರುಷ ತಂದಿದೆ. ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕದಾಧ್ಯಂತ ಯಕ್ಷಗಾನ ವಿಜೃಂಭಿಸಲಿ ಎಂಬುದು ಎಲ್ಲರ ಆಶಯ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!