ಜನ ಮನದ ನಾಡಿ ಮಿಡಿತ

Advertisement

ಕೇಳುವವರೇ ಇಲ್ಲ ರಾಜ್ಯದ ಜನತೆಯ ದುಸ್ಥಿತಿ; ಶಾಸಕ ವೇದವ್ಯಾಸ್‌ ಕಾಮತ್‌

ರಾಜ್ಯ ಕಾಂಗ್ರೆಸ್ಸಿನ ಆಡಳಿತದಲ್ಲಿ ಜನರ ಪರಿಸ್ಥಿಯು ಹೇಳತೀರದಾಗಿದ್ದು, ಈ ಬಗ್ಗೆ ಸರ್ಕಾರ ಗಮನವೇ ಹರಿಸುತ್ತಿಲ್ಲ. ಇದರಿಂದ ಸಾರ್ವಜನಿಕರ ದುಸ್ಥಿತಿ ಹೇಳತೀರದಾಗಿದ್ದು, ಇದು ಕಾಂಗ್ರೆಸ್‌ ಸರ್ಕಾರದ ನೀತಿಯ ಫಲವಾಗಿದೆ ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಅಟಲ್‌ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದರು.

ನಗರದ R.T. O, ಮಹಾನಗರ ಪಾಲಿಕೆ ಕಛೇರಿ, ಉಪ ನೋಂದಣಿ ಕಛೇರಿ, ರೇಷನ್ ಕಾರ್ಡ್ ತಿದ್ದುಪಡಿ ಹೀಗೆ ಅಗತ್ಯ ಕಾರ್ಯಗಳಿಗಾಗಿ ಸರ್ಕಾರಿ ಕಛೇರಿಗೆ ಬರುವ ಜನರಿಗೆ ಸರ್ವರ್ ಸಮಸ್ಯೆ ಎಂಬುದು ಸಾಮಾನ್ಯವಾಗಿಬಿಟ್ಟಿದೆ. ಜನಸಾಮಾನ್ಯರು ತಮ್ಮ ಎಲ್ಲ ಕೆಲಸಗಳನ್ನು ಬಿಟ್ಟು ಪ್ರತಿ ದಿನ ಸರ್ಕಾರಿ ಕಛೇರಿಗಳಿಗೆ ಅಲೆಯುವಂತಾಗಿದ್ದು ಸರ್ಕಾರದ ಅವ್ಯವಸ್ಥೆಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದರ ಜೊತೆಗೆ ಇ-ಖಾತಾ ಸಮಸ್ಯೆಯೂ ಸೃಷ್ಟಿಯಾಗಿದ್ದು ಒಂದು ಇ – ಖಾತಾ ಸಿಗಲು 3 ತಿಂಗಳವರೆಗೆ ಕಾಯಬೇಕಿತ್ತು. ನಿವೇಶನ, ಫ್ಲ್ಯಾಟ್‌ ನೋಂದಣಿಗಾಗಿ ಮಂಗಳೂರು ಮಿನಿ ವಿಧಾನಸೌಧದ ಉಪನೋಂದಣಿ ಕಚೇರಿಗೆ ಹೋಗಿ ಬಯೋಮೆಟ್ರಿಕ್‌ ನೀಡುತ್ತಿರುವ ಹಲವು ಜನರ ಬ್ಯಾಂಕ್‌ ಖಾತೆಗೆ ಸೈಬರ್‌ ವಂಚಕರು ಕನ್ನ ಹಾಕಿದ್ದು ಲಕ್ಷಾಂತರ ರೂಪಾಯಿ ವಂಚಿಸಿದ್ದರೂ ಜಿಲ್ಲಾಡಳಿತ ಹಾಗೂ ಸರ್ಕಾರ ಈ ವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ. ಕೂಡಲೇ ಈ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಬಿಟ್ಟು ಗಮನಹರಿಸಬೇಕು. ಮತ್ತು ಸರ್ಕಾರಿ ಕಛೇರಿಗೆ ಬಂದು ಸರ್ಕಾರದ ನಿಯಮಗಳನ್ನು ಪಾಲಿಸಿದ ಮೇಲೆಯೇ ಸಾರ್ವಜನಿಕರ ಮಾಹಿತಿ ಸೋರಿಕೆಯಾಗಿ ವಂಚನೆಗೊಳಗಾಗಿದ್ದರಿಂದ ಸಾರ್ವಜನಿಕರಿಗೆ ಉಂಟಾದ ನಷ್ಟವನ್ನು ಸರ್ಕಾರವೇ ಭರಿಸಿಕೊಡಬೇಕು ಎಂದರು.

ಉಚಿತ ಕರೆಂಟ್ ಕೊಡುತ್ತೇವೆ ಎಂದು ಹೇಳಿ ಕರೆಂಟ್ ಬಿಲ್ ಹೆಚ್ಚಳ ಮಾಡಿದ್ದಲ್ಲದೇ ಈಗ ಲೋಡ್ ಶೆಡ್ಡಿಂಗ್ ಆರಂಭಿಸಿ ಜನರನ್ನು ಕತ್ತಲೆಗೆ ದೂಡಲಾಗಿದೆ. ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಉಚಿತ ಗ್ಯಾರಂಟಿಗಳನ್ನು ಈಡೇರಿಸುವುದಕ್ಕಾಗಿ ಎಸ್ಸಿ.ಎಸ್ಟಿ ಸಮುದಾಯಕ್ಕೆ ನಿಗದಿ ಪಡಿಸಿದ್ದ 11,000 ಕೋಟಿ ರೂಪಾಯಿಗಳನ್ನು ಹಣ ದುರ್ಬಳಕೆ ಮಾಡಲಾಗುತ್ತಿದೆ. ವೃದ್ದರಿಗೆ, ಅಸಹಾಯಕರಿಗೆ ವರದಾನವಾಗಿದ್ದ ಸಂಧ್ಯಾ ಸುರಕ್ಷಾ, ಮನಸ್ವಿನಿ, ವಿಧವಾ ವೇತನಗಳ ಸಹಾಯಧನದಲ್ಲಿ ವ್ಯತ್ಯಯ ಉಂಟಾಗಿದ್ದು ಕ್ಷೇತ್ರದ ಜನ ಈ ಅವ್ಯವಸ್ಥೆ ಬಗ್ಗೆ ನನ್ನ ಗಮನಕ್ಕೂ ಬಂದಿದ್ದು, ಸರ್ಕಾರ ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದರು. ಇದೇ ವೇಳೆ ಶಿವಮೊಗ್ಗದಲ್ಲಿ ಈದ್ ವಿಲಾದ್‌ ಮೆರವಣಿಗೆ ವೇಳೆ ನಡೆದ ಗಲಭೆಗೆ ಕಾಂಗ್ರೆಸ್‌ ಸರ್ಕಾರದ ವೈಫಲ್ಯವೇ ಕಾರಣ ಎಂದರು.

ತಮ್ಮ ಅಕ್ರಮಗಳನ್ನು ಯಾರೂ ಪ್ರಶ್ನಿಸದ ಹಾಗೆ ಮಾಡಲು ಮಾಹಿತಿ ಹಕ್ಕು ಹೋರಾಟಗಾರರ ವಿವರಗಳನ್ನು ಪಡೆಯಲು ಸರ್ಕಾರ ಯತ್ನಿಸಿದ್ದು ತೀವ್ರ ಜನಾಕ್ರೋಶ ಹಾಗೂ ವಿರೋಧ ಪಕ್ಷಗಳ ವಿರೋಧದಿಂದ ಸರ್ಕಾರ ಅನಿವಾರ್ಯವಾಗಿ ಹಿಂದೆ ಸರಿದಿದೆ. ಹೀಗೆ ಸಮಸ್ಯೆಗಳ ಪಟ್ಟಿಯ ಸರಮಾಲೆಯೇ ಇದ್ದು, ಸರ್ಕಾರ ಈ ಕೂಡಲೇ ಅಗತ್ಯ ಕ್ರಮ ಕೈಗೊಂ

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!