ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನ ಗೋಲ್ಡ್ ಫಿಂಚ್ ಹೋಟೆಲಿನ ಸಭಾಂಗಣದಲ್ಲಿ “ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ” ಬಿಡುಗಡೆ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ದಿನಾಂಕ 28/10/2023 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ದಿನಪೂರ್ತಿ ಜರಗಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ದಿನಾಂಕ 29/10/2023 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಿನ್ನೆ ಸಿಲ್ವರ್ ಬಿಲ್ಸ್ ಬ್ಯಾಂಕೆಟ್ ಹಾಲ್, ಗೋಲ್ಡ್ ಫಿಂಚ್ ಹೋಟೆಲ್, ಬಂಟ್ಸ್ ಹಾಸ್ಟೆಲ್ ರಸ್ತೆ ಮಂಗಳೂರು ಇಲ್ಲಿ ಬಿಡುಗಡೆ ಮಾಡಲಾಯಿತು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವರು ರಮಾನಾಥ್ ರೈ, ಸಂಸದರು ನಳಿನ್ ಕುಮಾರ್ ಕಟೀಲ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಎ. ಸದಾನಂದ ಶೆಟ್ಟಿಯವರು ಪಾಲ್ಗೊಂಡಿದ್ದರು.


ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ, ಪೋಷಕ ಸದಸ್ಯರಾದ ಸುಧಾಕರ್ ಪೂಂಜ, ಲೋಕೇಶ್ ಶೆಟ್ಟಿ, ಜಗನ್ನಾಥ್ ಚೌಟ, ಜೈರಾಜ್ ರೈ ಅಧ್ಯಕ್ಷರು ರಾಮಕೃಷ್ಣ ಕ್ರೆಡಿಟ್ ಕೂಪೆರೇಟಿವ್ ಸೊಸೈಟಿ, ಪ್ರಿಥ್ವಿರಾಜ್ ರೈ ಕಾನೂನು ಸಲಹೆಗಾರರು, ವಿವಿಧ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ವಿವಿಧ ಸಮಿತಿಗಳ ಸಂಚಾಲಕರು, ಸಹಸಂಚಾಲಕರು, ಮಾಧ್ಯಮ ಮಿತ್ರರು, ಒಕ್ಕೂಟದ ಆಡಳಿತಾಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!