ಜನ ಮನದ ನಾಡಿ ಮಿಡಿತ

Advertisement

ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ನಿಂದ ರೈಲ್ವೇ ಹಳಿಗೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರ

ಬ0ಟ್ವಾಳ; ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ, ಕಾಂಕ್ರೀಟ್ ಮಿಕ್ಸರ್ ಯಂತ್ರವೊ0ದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ.

ಘಟನೆಯಿಂದ ಸದ್ಯ ಯಾವುದೇ ಪ್ರಾಣಾಪಾಯ ಅಗಿಲ್ಲ. ಅದೃಷ್ಟವಶಾತ್ ರೈಲು ಅ ಸಮಯದಲ್ಲಿ ಬರದೆ ಇದ್ದುದರಿಂದ ಯಾವುದೇ ಅವಘಡಗಳು ಸಂಭವಿಸಿಲ್ಲ.
ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ ತೆರವು ಕಾರ್ಯ ನಿರ್ವಹಿಸಿದರು.

ಕೋಟ್ಯಾಂತರ ರೂ ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳಿಗಾಗಿ ಇತ್ತೀಚೆಗೆ ಶಿಲಾನ್ಯಾಸ ನಡೆದಿದ್ದು, ಇದೀಗ ಕಾಮಗಾರಿ ಆರಂಭವಾಗಿದೆ. ರೈಲ್ವೆ ಪ್ಲಾಟ್ ಪಾರ್ಮ್ ನ ಸನಿಹದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸುವ ಕಂಪೆನಿಯ ಕಾಂಕ್ರೀಟ್ ಮಿಕ್ಸರ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡ ಹಳಿಗೆ ಉರುಳಿ ಬಿದ್ದಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಹಳಷ್ಟು ಎಚ್ಚರಿಕೆಯಿಂದ ಇಂತಹ ಕಾಮಗಾರಿ ನಡೆಯಬೇಕಾಗಿದೆ. ಯಾಕೆಂದರೆ ಇಂತಹ ಸೂಕ್ಷ್ಮ ಜಾಗದಲ್ಲಿ ಕಾಮಗಾರಿ ನಡೆಸುವ ವೇಳೆ ನುರಿತ ಹಾಗೂ ವಿಶೇಷ ಅನುಭವದ ಕಾರ್ಮಿಕರು ಕೆಲಸ ನಿರ್ವಹಿಸಬೇಕಾಗಿದೆ.
ಅಜಾಗರೂಕತೆಯಿಂದ ಕಾಮಗಾರಿ ನಡೆಸಿದ ಸಂದರ್ಭದಲ್ಲಿ ರೈಲು ಅಪಘಾತಕ್ಕೆ ಕಾರಣವಾಗಬಹುದು,ಮತ್ತು ಬಹು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!