ದಕ್ಷಿಣ ಕನ್ನಡ : ಹವಾಮಾನ ವೈಪರಿತ್ಯದಿಂದಾಗಿ ಮತ್ತು ಮಳೆ ಕೊರತೆಯಿಂದಾಗಿ, ಈ ವರ್ಷ ಮುಂದಿನ ದಿನಗಳು ಎಂದಿನಂತಿಲ್ಲ.ವಿಪರೀತ ತಾಪಮಾನ ಏರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಸಾಮಾನ್ಯಕ್ಕಿಂತ 09% ತಾಪಮಾನ ಏರಿಕೆಯಾಗಲಿದ್ದು ಇದು ಮನುಷ್ಯ ಸೇರಿದಂತೆ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದಾಗಿದೆ, ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಇಡೀ ಭಾರತ ದೇಶದಲ್ಲಿ ಹವಾಮಾನ ವೈಪರೀತ್ಯದ ಪರಿಣಾಮ ಸಮಸ್ಯೆ ಕಾಡಬಹುದಾಗಿದ್ದು, ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ. ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲೇಬೇಕಿದೆ.
ತಾಪಮಾನ ಏರಿಕೆಯಾಗಿ ಮಣ್ಣಿನ ಫಲವತ್ತತೆ, ಹಾಗೂ ಸೂಕ್ಷ್ಮಜೀವಿಗಳ ಮೇಲೆ ಪರಿಣಾಮ ಬೀರಲಿದೆ ಮಣ್ಣಿನಲ್ಲಿ ತೇವಾಂಶ ಕಡಿಮೆಯಾಗಿ ಇಳುವರಿ ಕಡೆಮೆ ಬರುವ ಲಕ್ಷಣಗಳು ಕಾಣುತ್ತಿವೆ.


ಹಾಗಾಗಿ ಉತ್ಪಾದೆನೆಯಲ್ಲಿ ಶೇ 10ರಿಂದ 15 ರಷ್ಟು ಕುಸಿತ ಕಾಣಲಿದೆ ಎಂದು ಕೃಷಿ ಇಲಾಖೆಯ ಮೂಲಗಳು ತಿಳಿಸಿವೆ.
ಆದರೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ದಕ್ಷಿಣ ಜಿಲ್ಲೆಗಳಿಗೆ ಕಡಿಮೆ ಪ್ರಮಾಣದ ಶಾಖ ಇರಲಿದೆ. ಹಾಗೂ ಏಕದಳ ಮತ್ತು ಬೇಳೆಕಾಳು ಬೆಳೆಯುವ ಪ್ರದೇಶಗಳಾಧ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಪ್ರದೇಶಗಳಲ್ಲಿ ಪ್ರಸ್ತುತ ಹವಾಮಾನ ಪರಿಸ್ಥಿತಿಯಿಂದಾಗಿ ಬೆಳೆಗಳ ಮೇಲೆ ಹೆಚ್ಚಿನ ಪರಿಣಾಮ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



