ಬಜಪೆ: ಮೂಳೂರು ಗ್ರಾಮದ ಗುರುಪುರ ಎಂಬಲ್ಲಿ ಮರಳನ್ನು ಅಕ್ರಮ ಗಣಿಗಾರಿಗೆ ನಡೆಸಿ ಯಾವುದೇ ಪರವಾಣಿಗೆ ಇಲ್ಲದೆ ಮರಳನ್ನು ಟಿಪ್ಪರ್ ಲಾರಿಗಳಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಬಜಪೆ ಪೊಲೀಸರು ದಾಳಿ ನಡೆಸಿದ್ದಾರೆ.


ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ನಡೆಸಲು ಉಪಯೋಗಿಸಿರುವ ತಲಾ 5 ಲಕ್ಷ ರೂಪಾಯಿ ಮೌಲ್ಯದ ಮರಳು ತುಂಬಿರುವ 2 ಟಿಪ್ಪರ್ ಲಾರಿಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ರವರ ನೇತ್ರತ್ವದಲ್ಲಿ PSI ಗುರಪ್ಪ ಕಾಂತಿ, PSI ರೇವಣಸಿದ್ದಪ್ಪ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.



