ಜನ ಮನದ ನಾಡಿ ಮಿಡಿತ

Advertisement

ವಿವಿಧ ಇಲಾಖೆಗಳ ಅಧಿಕಾರಿಗಳು ಗೈರು; ಗ್ರಾಮ ಸಭೆ ರದ್ದು..!

ಮೂಡುಬಿದಿರೆ: ವಿವಿಧ ಇಲಾಖೆಗಳ ಅಧಿಕಾರಿಗಳಿಲ್ಲದೆ ಗ್ರಾಮಸಭೆ ನಡೆಸಬಾರದೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸಭೆಯನ್ನು ರದ್ದುಗೊಳಿಸಿದ ಘಟನೆ ಇರುವೈಲಿನಲ್ಲಿ ಗುರುವಾರ ನಡೆದಿದೆ.


ಇರುವೈಲು ಗ್ರಾ.ಪಂನ ಎರಡನೇ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಲಲಿತಾ ಮೊಗೇರ ಅವರ ಅಧ್ಯಕ್ಷತೆಯಲ್ಲಿ ತೋಡಾರಿನ ರ‍್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆಯುತ್ತಿದ್ದ ಸಂರ‍್ಭದಲ್ಲಿ ಗ್ರಾಮಸ್ಥರು ಮಾತನಾಡಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ಬಂದಿದ್ದು ಉಳಿದ ಅಧಿಕಾರಿಗಳು ಯಾಕೆ ಭಾಗವಹಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದರು. ಮಾಜಿ ಸದಸ್ಯ ಜಯರಾಮ್ ಬಂಗೇರ ಮಾತನಾಡಿ, ಗ್ರಾಮಸಭೆಯಲ್ಲಿ ಅತಿ ಅಗತ್ಯವಾಗಿ ಇರಬೇಕಾದ ಗ್ರಾಮಕರಣಿಕರು, ಮೆಸ್ಕಾಂ, ಪಶುಸಂಗೋಪನೆ ಸಹಿತ ಪ್ರಮುಖ ಇಲಾಖೆಗಳ ಅಧಿಕಾರಿಗಳೇ ಬಂದಿಲ್ಲ. ವಿವಿಧ ಇಲಾಖೆಯ ಸಮಸ್ಯೆಗಳ ಕುರಿತು, ಆ ಇಲಾಖೆಗಳ ಮಾಹಿತಿಯನ್ನು ಪಂಚಾಯತ್ ಅಧಿಕಾರಿಗಳು, ಸದಸ್ಯರು ನೀಡಲು ಸಾಧ್ಯವೇ?. ಗ್ರಾಮಸಭೆಗೆ ಕನಿಷ್ಠ 15 ಇಲಾಖೆಗಳ ಅಧಿಕಾರಿಗಳು ಇರಬೇಕು ಎಂದು ಹೇಳಿದರು. ಜನರಿಗೆ ಅಗತ್ಯ ಮಾಹಿತಿಗಾಗಿ ಬೇಕಾದಂತಹ ಅಧಿಕಾರಿಗಳು ಇರದಿದ್ದರಿಂದ ಸಭೆಯನ್ನು ರದ್ದುಗೊಳಿಸಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು.


ಈ ಕುರಿತು ಗ್ರಾಮಸ್ಥರು ಪ್ರಶ್ನಿಸುವ ವೇಳೆ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಾಮಕಿ ನಡೆದಿದೆ.


ಜಯರಾಮ್ ಬಂಗೇರ, ಪ್ರವೀಣ್, ಆನಂದ, ಪ್ರಶಾಂತ್, ರಾಜೇಶ್ ನಾಯ್ಕ್, ಮೋಹನ ನಾಯ್ಕ್ ಪಂಜ ವಿಚಾರಕ್ಕೆ ಪೂರಕವಾಗಿ ಮಾತನಾಡಿದರು. ಉಳಿದ ಗ್ರಾಮಸ್ಥರು ಧ್ವನಿಗೂಡಿಸಿದರು.


ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಆಗಬೇಕಾದ ಯಾವುದೇ ಕೆಲಸಗಳು ಆಗ್ತಾ ಇಲ್ಲ. ಗ್ರಾಮಸಭೆಯಲ್ಲಾದರೂ ಈ ಬಗ್ಗೆ ಕೇಳೋಣವೆಂದರೆ ಅಧಿಕಾರಿಗಳೇ ಇಲ್ಲ ಎಂದು ಗ್ರಾಮಸ್ಥ ಶಂಕರ್ ನಾಯ್ಕ್ ಹೇಳಿದರು.


ಗ್ರಾಮಸ್ಥರು ಹಾಗೂ ಸದಸ್ಯರ ನಡುವೆ ತೀವ್ರವಾಗಿ ಮಾತಿನ ಚಕಾಮಕಿ ಉಂಟಾದಾಗ ಮಧ್ಯಪ್ರವೆಶಿಸಿದ ನೋಡೆಲ್ ಅಧಿಕಾರಿ ಶೈಲಾ ಕೆ. ಕಾರಿಗಿ, ಎಲ್ಲರೂ ಒಟ್ಟಾಗಿ ಮಾತನಾಡಿದರೆ ಸಮಸ್ಯೆಗಳು ರ‍್ಥವಾಗುವುದಿಲ್ಲ. ಒಬ್ಬೊಬ್ಬರು ತಮ್ಮ ಸಮಸ್ಯೆಗಳನ್ನು ತಿಳಿಸಬೇಕು. ಗ್ರಾಪಂ ಗೈರಾದ ಅಧಿಕಾರಿಗಳ ಇಲಾಖೆಗಳಿಗೆ ನೋಟಿಸ್ ನೀಡಲಾಗುವುದು. ಈ ಸಂರ‍್ಭದಲ್ಲಿ ಸಭೆ ನಡೆಸುವುದು ಅಸಾಧ್ಯ. ಮುಂದೂಡೋಣ ಎಂದರು.


ಸಭೆಯನ್ನು ರದ್ದುಪಡಿಸಿದ ಬಳಿಕ ಗ್ರಾಮಸ್ಥರು ಹಾಗೂ ಸದಸ್ಯರ ನಡುವೆ ವೈಯಕ್ತಿಕ ವಿಚಾರವನ್ನಿಟ್ಟುಕೊಂಡು ಮಾತಿನ ಚಕಾಮಕಿ ನಡೆಯಿತು.


ಪಿಡಿಒ ಶೇಖರ್, ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!