ಜನ ಮನದ ನಾಡಿ ಮಿಡಿತ

Advertisement

“ಕುದ್ರು ಚಿತ್ರ” ರಿಲೀಸ್‌; ಭಾರತ್ ಸಿನಿಮಾಸ್‌ನಲ್ಲಿ ಭರ್ಜರಿ ಪ್ರದರ್ಶನ

ಮಂಗಳೂರು; ಕರಾವಳಿಯಲ್ಲಿ ಸೆನ್ಸೆಷನಲ್ ಮೂಡಿಸಿದ್ದ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್‌ನಡಿ, ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಇಂದು ಕರ್ನಾಟಕದಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

ಈಗಾಗಲೇ ವಿಭಿನ್ನ ಟೈಟಲ್ ಮೂಲಕ ಸಿನಿಪ್ರಿಯರ ಮನಗೆದ್ದ ಕುದ್ರು ಸಿನಿಮಾದ ಬಿಡುಗಡೆಗೆ ಭಾರತ್ ಸಿನಿಮಾಸ್‌ನಲ್ಲಿ ಇಂದು ತೆಲಿಕೆದ ಬೊಳ್ಳಿ ದೇವ್‌ದಾಸ್ ಕಾಪಿಕಾಡ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ರು. ಬಳಿಕ ಮಾತಾನಾಡಿದ ಇವರು, ಸೌದಿಅರೇಬಿಯಾದಲ್ಲಿ ಕುದ್ರು ಸಿನಿಮಾದ ಶೂಟಿಂಗ್ ನಡೆದಿರುವುದು ತುಳುಚಿತ್ರರಂಗಕ್ಕೆ ಹೆಮ್ಮೆಯ ವಿಚಾರವಾಗಿದೆ. ಹಾಗೇನೆ ನೈಜ ಕಥೆಯನ್ನು ಒಳಗೊಂಡ ‘ಕುದ್ರು ಚಿತ್ರ ಗೆಲ್ಲಲ್ಲಿ ಎಂದು ಶುಭಹಾರೈಸಿದ್ದಾರೆ.

ಇದೇ ವೇಳೆ ಚಿತ್ರದ ನಿರ್ದೇಶಕ ಭಾಸ್ಕರ್‌ನಾಯ್ಕ್ ಮಾತಾನಾಡಿ, ಈಗಾಗಲೇ ಚಿತ್ರದ ಪ್ರಿಮಿಯರ್ ಶೋ ಎಲ್ಲೆಡೆ ಸಾಕಷ್ಟು ಪ್ರಶಂಸೆ ಪಡೆದಿದೆ.

ಇದೀಗ ಚಿತ್ರ ರಿಲೀಸ್ ಆಗಿದ್ದು, ತುಳು ಚಿತ್ರದಲ್ಲಿ ಕಾಮಿಡಿ ಇರತ್ತೆ ಆದರೆ ಈ ಚಿತ್ರದಲ್ಲಿ ಸ್ವಲ್ಪ ಬದಾಲಾವಣೆ ಮಾಡಲಾಗಿದೆ. ಇದನ್ನ ಜನರು ಇಷ್ಟಪಡುತ್ತಾರೆ ಎಂಬ ಭರವಸೆ ಇದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಅಂತೆಯೇ ವಿಶ್ವವಿದ್ಯಾನಿಲಯ ಕಾಲೇಜಿನ ಫ್ರೊಫೆಸರ್ ಲಕ್ಷ್ಮಣ,, ಹಾಗೂ ನಿರ್ದೇಶಕರ ಆಪ್ತರಾದ ಪ್ರವೀಣ್‌ರವರು ಕುದ್ರು ಚಿತ್ರದ ಯಶಸ್ಸಿಗೆ ಶುಭಹಾರೈಸಿದ್ದಾರೆ. ಇನ್ನೂ ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಹಾಗೂ ನಾಯಕ ನಟಿ ಪ್ರಿಯಾ ಹೆಗ್ಡೆ ಚಿತ್ರದಲ್ಲಿ ಅಭಿನಯಿಸಿದ ಅನುಭವವನ್ನು ಹಂಚಿಕೊAಡಿದ್ದಾರೆ. ಕರಾವಳಿಯ ವಿಭಿನ್ನ ಕಥಾಹಂದರವನ್ನು ಒಳಗೊಂಡ ಈ ಕುದ್ರು ಚಿತ್ರ ಸಿನಿಪ್ರಿಯರ ಮನಗೆದ್ದು, ಸಕ್ಸಸ್ ಕಾಣಲಿ ಅನ್ನೋದು ನಮ್ಮ ಆಶಯ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!