ಜನ ಮನದ ನಾಡಿ ಮಿಡಿತ

Advertisement

ಉಡಾ ಬೇಟೆಯಾಡಿ ಫೋಟೊಗಳಿಗೆ ಪೋಸ್ ಕೊಟ್ಟವ ಈಗ ಪೋಲೀಸರ ಅತಿಥಿ!!!

ಬಂಟ್ವಾಳ: ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾ (indian monitor lizard) ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಫೋಟೊಗಳಿಗೆ ಪೋಸ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ. ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗದ ಸುಧಾಕರ ಎಂದು ಗುರುತ್ತಿಸಲಾಗಿದ್ದು ಆತನ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ 1972 ಅನ್ವಯ ಕೇಸ್ ದಾಖಲು ಮಾಡಿದ್ದಾರೆ.

ಅಕ್ಟೋಬರ್ 11 ರಂದು ಘಟನೆ ಬೆಳಕಿಗೆ ಬಂದಿದ್ದು ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ ಅದನ್ನು ತೆಗೆದುಕೊಂಡು ವಿಜ್ರಂಭಿಸುತ್ತಿದ್ದ ಎಂದು ಸ್ಥಳಿಯರು ಮಾಹಿತಿ ನೀಡಿದ್ದು ಜೊತೆಗೆ ಸಾಮಾಜಿಕ ಜಾಲಾ ತಾಣಗಳಲ್ಲಿ ಅದನ್ನು ಹರಿಯ ಬಿಟ್ಟಿದ್ದ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ಬಂಟ್ವಾಳ ವಲಯ ಅರಣ್ಯಾಧಿಕಾರಿಯವರು ಪ್ರಕರಣದ ತನಿಖೆ ನಡಸುತ್ತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಅಂಥೋಣಿ ಎಸ್‌. ಮರಿಯಪ್ಪ ಮಾಹಿತಿ ನೀಡಿದ್ದಾರೆ.

ಉಡಾ ಸಾಯಿಸಿದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿ ಸುಧಾಕರ್ ತಲೆ ಮರೆಸಿಕೊಂಡಿದ್ದಾನೆ. ಆತ ಉಡಾ ಸಾಯಿಸಿ ಶೇರ್ ಮಾಡಿದ ಸಾಮಾಜಿಕ ಜಾಲಾತಾಣ ವಾಟ್ಸ್‌ಅಪ್ ಎಡ್ಮಿನ್ ನನ್ನು ವಿಚಾರಣೆ ಕರೆಸಿ ತನಿಖೆ ನಡಸಿದ್ದು ಆತನ ಸಿಡಿಆರ್‌ ಪರಿಶೀಲನೆ ನಢೆಸುತ್ತಿದ್ದು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದಿದ್ದಾರೆ.
ಚರ್ಮಾ, ಮೂಳೆಗಳಿಗಾಗಿ ಬೇಟೆಗಾರರ ವಕ್ರ ದೃಷ್ಟಿಗೆ ಬಿದ್ದಿರುವ ಉಡಾ ಅವನತಿಯ ಹಾದಿಯಲ್ಲಿದ್ದು ಇದನ್ನು (ಪ್ರವರ್ಗ A)ಯನ್ನುಅಳಿವಿನ ಅಂಚಿನಲ್ಲಿರುವ ಅಪರೂಪದ ಸರೀಸೃಪ ಎಂದು ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!