ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರಿನಲ್ಲಿ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ ಹಣ ಪತ್ತೆ ಪ್ರಕರಣ..!

ಬಂಟ್ವಾಳ: ಬೆಂಗಳೂರಿನಲ್ಲಿ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ ಹಣ ಪತ್ತೆಯಾದ ಪ್ರಕರಣವನ್ನು ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡಿನಲ್ಲಿ ಸೋಮವಾರ ಬೆಳಗ್ಗೆ ಪ್ರತಿಭಟನೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ನಡೆಯಿತು.


ಈ ಸಂದರ್ಭ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕಳೆದ ಬಾರಿ ಚುನಾವಣಾ ಪ್ರಚಾರದ ಸಂದರ್ಭ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ ಮಾತನ್ನು ನೆನಪಿಸಿ, ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದರೆ, ಕರ್ನಾಟಕವನ್ನು ಎಟಿಎಂ ಮಾಡುತ್ತದೆ ಎಂಬುದು ಈಗ ಸಾಬೀತಾಗುತ್ತಿದೆ. ಭ್ರಷ್ಟಾಚಾರದ ಮೂಲಕ ಅಧಿಕಾರ ನಡೆಸುತ್ತಿರುವುದು ಈ ಪ್ರಕರಣದ ಮೂಲಕ ಬೆಳಕಿಗೆ ಬರುತ್ತಿದ್ದು, ಇದನ್ನು ಜನರು ಗಮನಿಸುತ್ತಿದ್ದು, ಮುಂದೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.


ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಜಾರಿ ಮಾಡುತ್ತೇನೆ ಎಂದಿದ್ದ ಉಚಿತ ಸ್ಕೀಮುಗಳಿಂದ ಈಗ ರಾಜ್ಯ ದಿವಾಳಿಯಾಗುವ ಅಂಚಿನಲ್ಲಿದ್ದು, ಇದೀಗ ಗುತ್ತಿಗೆದಾರನ ಮನೆಯಲ್ಲಿ ಹಣ ಸಿಕ್ಕಿರುವುದು ಭ್ರಷ್ಟಾಚಾರ ಇದೆ ಎಂಬುದನ್ನು ಸಾಬೀತುಪಡಿಸಿದೆ. ಬಿಜೆಪಿ ಸರಕಾರವಿದ್ದಾಗ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಗೆ ಅದನ್ನು ಸಾಬೀತುಪಡಿಸಲು ಆಗಿರಲಿಲ್ಲ. ಆದರೆ ಈಗ ಗುತ್ತಿಗೆದಾರನ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿರುವುದು ಅಧಿಕಾರಸ್ಥರು ಇದರಲ್ಲಿ ಶಾಮೀಲಾಗಿರಬಹುದು ಎಂಬ ಶಂಕೆಯನ್ನು ಮೂಡಿಸುತ್ತಿದ್ದು, ಸರಿಯಾದ ತನಿಖೆ ಅವಶ್ಯ ಎಂದರು.


ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ರಾಜ್ಯ ನಾಯಕಿ ಸುಲೋಚನಾ ಜಿ.ಕೆ.ಭಟ್, ಜಿಪಂ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಬುಡಾ ಮಾಜಿ ಅಧ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಸಹಿತ ವಿವಿಧ ಮೋರ್ಚಾಗಳ ಪ್ರಮುಖರು, ಪುರಸಭೆ ಸದಸ್ಯರು, ಪಕ್ಷ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!