ಜನ ಮನದ ನಾಡಿ ಮಿಡಿತ

Advertisement

ಪಂದ್ಯಾಟಗಳು ಅನ್ಯೋನ್ಯತೆಗೆ ಪೂರಕ ‌; ಡಾ. ಅಶಿತ್ ಶೆಟ್ಟಿಯಾನ್

ಹಳೆಯಂಗಡಿ : ಪ್ರತಿಯೊಂದು ಚರ್ಚ್ ಗಳು ಆಯೋಜಿಸುತ್ತಿರುವ ಪಂದ್ಯಾಟಗಳು ಸಭೆಯ ಹಾಗೂ ಕುಟುಂಬಗಳ ಅನ್ಯೋನ್ಯತೆಗೆ ಪೂರಕವಾಗಿ ಇದ್ದು, ಸಭೆಗಳಲ್ಲಿ ಉತ್ತಮ ವಾತಾವರಣವನ್ನು ಸೃಷ್ಟಿ ಮಾಡಲು ಕಾರಣವಾಗಿದೆ ಎಂದು ಮಂಗಳೂರಿನ ಅಥೇನ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಆದ ಡಾ. ಅಶಿತ್ ಶೆಟ್ಟಿಯನ್ ನುಡಿದರು.

ಅವರು ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ನಡೆದ ಸುಗ್ಗಿ ಹಬ್ಬದ ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಸಭಾ ಪಾಲಕರಾದ ರೆವೆರೆಂಡ್ ಅಮೃತ್ ರಾಜ್ ಖೊಡೆ ರವರು ವಹಿಸಿ ಶುಭ ಹಾರೈಸಿದರು.

ಸಿಎಸ್ಐ ಕ್ರಿಸ್ತ ಕಾಂತಿ ಚರ್ಚ್ ಪಣಂಬೂರು ಇಲ್ಲಿಯ ಸಭಾ ಪಾಲಕರಾದ ರೆವೆರೆಂಡ್ ಸಂಧ್ಯಾ ಖೊಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಭಾ ಪರಿಪಾಲನ ಸಮಿತಿಯ ಸದಸ್ಯರಾದ ಆಸ್ಟಿನ್ ಕರ್ಕಡ, ವಸಂತ ಬೆರ್ನಾಡ್,
ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಜೇಮ್ಸ್ ಕರ್ಕಡ, ಮತ್ತು ಸಿಡ್ನಿ ಕರ್ಕಡ ಉಪಸ್ಥಿರಿದ್ದರು.

ಪಂದ್ಯಾಟ ಸಮಿತಿಯ ಕಾರ್ಯದರ್ಶಿ ರೆಮ್ಮಿ ಎಲಿಸಾ ಸಾಮುವೆಲ್, ಸ್ವಾಗತಿಸಿ ಖಜಾಂಜಿ ಸುಹಾನ್ ಪಾಲನ್ನ ವಂದಿಸಿದರು. ಅಡ್ಲಿನ್ ನವ್ಯ ಪಾಲನ್ನ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!