ಜನ ಮನದ ನಾಡಿ ಮಿಡಿತ

Advertisement

ಪಂದ್ಯಾಟಗಳು ಅನ್ಯೋನ್ಯತೆಗೆ ಪೂರಕ ‌; ಡಾ. ಅಶಿತ್ ಶೆಟ್ಟಿಯಾನ್

ಹಳೆಯಂಗಡಿ : ಪ್ರತಿಯೊಂದು ಚರ್ಚ್ ಗಳು ಆಯೋಜಿಸುತ್ತಿರುವ ಪಂದ್ಯಾಟಗಳು ಸಭೆಯ ಹಾಗೂ ಕುಟುಂಬಗಳ ಅನ್ಯೋನ್ಯತೆಗೆ ಪೂರಕವಾಗಿ ಇದ್ದು, ಸಭೆಗಳಲ್ಲಿ ಉತ್ತಮ ವಾತಾವರಣವನ್ನು ಸೃಷ್ಟಿ ಮಾಡಲು ಕಾರಣವಾಗಿದೆ ಎಂದು ಮಂಗಳೂರಿನ ಅಥೇನ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಆದ ಡಾ. ಅಶಿತ್ ಶೆಟ್ಟಿಯನ್ ನುಡಿದರು.

ಅವರು ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ನಡೆದ ಸುಗ್ಗಿ ಹಬ್ಬದ ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಸಭಾ ಪಾಲಕರಾದ ರೆವೆರೆಂಡ್ ಅಮೃತ್ ರಾಜ್ ಖೊಡೆ ರವರು ವಹಿಸಿ ಶುಭ ಹಾರೈಸಿದರು.

ಸಿಎಸ್ಐ ಕ್ರಿಸ್ತ ಕಾಂತಿ ಚರ್ಚ್ ಪಣಂಬೂರು ಇಲ್ಲಿಯ ಸಭಾ ಪಾಲಕರಾದ ರೆವೆರೆಂಡ್ ಸಂಧ್ಯಾ ಖೊಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಭಾ ಪರಿಪಾಲನ ಸಮಿತಿಯ ಸದಸ್ಯರಾದ ಆಸ್ಟಿನ್ ಕರ್ಕಡ, ವಸಂತ ಬೆರ್ನಾಡ್,
ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಜೇಮ್ಸ್ ಕರ್ಕಡ, ಮತ್ತು ಸಿಡ್ನಿ ಕರ್ಕಡ ಉಪಸ್ಥಿರಿದ್ದರು.

ಪಂದ್ಯಾಟ ಸಮಿತಿಯ ಕಾರ್ಯದರ್ಶಿ ರೆಮ್ಮಿ ಎಲಿಸಾ ಸಾಮುವೆಲ್, ಸ್ವಾಗತಿಸಿ ಖಜಾಂಜಿ ಸುಹಾನ್ ಪಾಲನ್ನ ವಂದಿಸಿದರು. ಅಡ್ಲಿನ್ ನವ್ಯ ಪಾಲನ್ನ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!