ಜನ ಮನದ ನಾಡಿ ಮಿಡಿತ

Advertisement

ಪಂದ್ಯಾಟಗಳು ಅನ್ಯೋನ್ಯತೆಗೆ ಪೂರಕ ‌; ಡಾ. ಅಶಿತ್ ಶೆಟ್ಟಿಯಾನ್

ಹಳೆಯಂಗಡಿ : ಪ್ರತಿಯೊಂದು ಚರ್ಚ್ ಗಳು ಆಯೋಜಿಸುತ್ತಿರುವ ಪಂದ್ಯಾಟಗಳು ಸಭೆಯ ಹಾಗೂ ಕುಟುಂಬಗಳ ಅನ್ಯೋನ್ಯತೆಗೆ ಪೂರಕವಾಗಿ ಇದ್ದು, ಸಭೆಗಳಲ್ಲಿ ಉತ್ತಮ ವಾತಾವರಣವನ್ನು ಸೃಷ್ಟಿ ಮಾಡಲು ಕಾರಣವಾಗಿದೆ ಎಂದು ಮಂಗಳೂರಿನ ಅಥೇನ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಆದ ಡಾ. ಅಶಿತ್ ಶೆಟ್ಟಿಯನ್ ನುಡಿದರು.

ಅವರು ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ನಡೆದ ಸುಗ್ಗಿ ಹಬ್ಬದ ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಸಭಾ ಪಾಲಕರಾದ ರೆವೆರೆಂಡ್ ಅಮೃತ್ ರಾಜ್ ಖೊಡೆ ರವರು ವಹಿಸಿ ಶುಭ ಹಾರೈಸಿದರು.

ಸಿಎಸ್ಐ ಕ್ರಿಸ್ತ ಕಾಂತಿ ಚರ್ಚ್ ಪಣಂಬೂರು ಇಲ್ಲಿಯ ಸಭಾ ಪಾಲಕರಾದ ರೆವೆರೆಂಡ್ ಸಂಧ್ಯಾ ಖೊಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಭಾ ಪರಿಪಾಲನ ಸಮಿತಿಯ ಸದಸ್ಯರಾದ ಆಸ್ಟಿನ್ ಕರ್ಕಡ, ವಸಂತ ಬೆರ್ನಾಡ್,
ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಜೇಮ್ಸ್ ಕರ್ಕಡ, ಮತ್ತು ಸಿಡ್ನಿ ಕರ್ಕಡ ಉಪಸ್ಥಿರಿದ್ದರು.

ಪಂದ್ಯಾಟ ಸಮಿತಿಯ ಕಾರ್ಯದರ್ಶಿ ರೆಮ್ಮಿ ಎಲಿಸಾ ಸಾಮುವೆಲ್, ಸ್ವಾಗತಿಸಿ ಖಜಾಂಜಿ ಸುಹಾನ್ ಪಾಲನ್ನ ವಂದಿಸಿದರು. ಅಡ್ಲಿನ್ ನವ್ಯ ಪಾಲನ್ನ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!